ಬೆಂಗಳೂರು,ನ.20: ಬಿಜೆಪಿ ಸರಕಾರ ಬೀಳಲು ಬಿಡುವುದಿಲ್ಲ ಎನ್ನುತ್ತಲೇ ಬಂದಿದ್ದ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಇದೀಗ ಮೈತ್ರಿ ಸರಕಾರ ಪತನಗೊಳ್ಳಲು ಕಾರಣರಾದ ಅನರ್ಹ ಶಾಸಕರನ್ನು ಉಪ ಚುನಾವಣೆಯಲ್ಲಿ ಸೋಲಿಸಲೇ ಬೇಕು ಎಂದು ನಿರ್ಧರಿಸಿದ್ದಾರೆ.
ಅಗತ್ಯ ಬಿದ್ದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ. ಪರಿಸ್ಥಿತಿ ಕೈಮೀರುವ ಬಗ್ಗೆ ಸುಳಿವು ಪಡೆದಿರುವ ಸಿಎಂ ಯಡಿಯೂರಪ್ಪ ತಂತ್ರಗಾರಿಕೆ ಬದಲಾಯಿಸಲು ನಿರ್ಧರಿಸಿದ್ದಾರೆ.