ಕುಮಾರಸ್ವಾಮಿಗೂ ಕಂಟಕ!

ಕುಮಾರಸ್ವಾಮಿಗೂ ಕಂಟಕ!

ಬೆಂಗಳೂರು, ಸೆ. 5: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಎಚ್ ಡಿಕೆ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅಕ್ರಮವಾಗಿ ನಡೆದಿದೆ ಎನ್ನಲಾದ ಡಿನೋಟಿಫಿಕೇಷನ್ ಸಂಬಂಧ ಅಕ್ಟೋಬರ್ 4ರಂದು ವಿಚಾರಣೆಗೆ ಹಾಜರಾಗುವಂಗತೆ ನ್ಯಾಯಾಲಯ ಇಂದು ಸಮನ್ಸ್ ಜಾರಿಗೊಳಿಸಿದೆ.

2007ರಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಹಲಗೆ ವಡೇರಹಳ್ಳಿಯ 2 ಎಕರೆ 34 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನಲೆ 2012 ರಲ್ಲಿ ಅಧಿಕೃತವಾದ ದೂರು ದಾಖಲಾಗಿತ್ತು. ಬನಶಂಕರಿಯ 5ನೇ ಹಂತದಲ್ಲಿರುವ ಹಲಗೆ ವಡೇರಹಳ್ಳಿಯಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಚಾಮರಾಜನಗರದ ಸಂತೇಮರಹಳ್ಳಿಯ ಮಹದೇವಸ್ವಾಮಿ ಎಂಬುವವರು ದೂರು ಸಲ್ಲಿಸಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos