ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಬೆಂಕಿ

ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಬೆಂಕಿ

ಮಂಡ್ಯ, ಏ. 11, ನ್ಯೂಸ್ ಎಕ್ಸ್ ಪ್ರೆಸ್: ಮೈತ್ರಿಕೂಟದ ಅಭ್ಯರ್ಥಿ, ಪುತ್ರ ನಿಖಿಲ್ ಕುಮಾರಸ್ವಾಮಿ ಪರವಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಿರುಸಿನ ಪ್ರಚಾರ ನಡೆಸಿದ್ದಾರೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಪೀಹಳ್ಳಿ ಪ್ರಚಾರ ಮುಗಿಸಿ ತೆರಳುವ ಸಂದರ್ಭದಲ್ಲಿ ಸಿಎಂ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೂಡಲೇ ಭದ್ರತಾ ಸಿಬ್ಬಂದಿ ಸಿಎಂ ಹಾಗೂ ಕಾರಿನಲ್ಲಿದ್ದವರನ್ನು ಇಳಿಸಿ ಬೇರೆ ಕಾರಿನಲ್ಲಿ ಕೆ.ಆರ್.ಎಸ್.ನ ಖಾಸಗಿ ಹೋಟೆಲ್ ಗೆ ಕಳುಹಿಸಿದ್ದಾರೆ.

ಇನ್ನೂ ಪ್ರಚಾರ ನಡೆಸಬೇಕಿದ್ದ ಹಳ್ಳಿಗಳಲ್ಲಿ ಸಮಯದ ಅಭಾವದ ಕಾರಣ ಪ್ರಚಾರ ನಡೆಸಲು ಸಾಧ್ಯವಾಗಿಲ್ಲ. ಕಾರಿನಲ್ಲಿ ಸಿಎಂ ಕೈ ಬೀಸಿಕೊಂಡು ತೆರಳುವಾಗ, ಗ್ರಾಮವೊಂದರಲ್ಲಿ ಬೆಂಬಲಿಗರು ಪಟಾಕಿ ಸಿಡಿಸಿದ್ದಾರೆ. ಇದರಿಂದ ಬೆಂಕಿ ತಗುಲಿರಬಹುದೆಂದು ಹೇಳಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos