ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಸಿ.ಟಿ ರವಿ

ಕುಮಾರಸ್ವಾಮಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿ : ಸಿ.ಟಿ ರವಿ

ಬೆಂಗಳೂರು, ಜೂ. 26 : ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕರೇಗುಡ್ಡಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ವೈಟಿಪಿಎಸ್ ಸಿಬ್ಬಂದಿಗಳು ಸಿಎಂ ಬಸ್ ಅನ್ನು ತಡೆದು ಮನವಿ ಸಲ್ಲಿಸಿದ್ದರು. ಸಿಎಂ ಗ್ರಾಮವಾಸ್ತವ್ಯದ ವೇಳೆ ಪ್ರತಿಭಟನಾಕಾರರ ಮೇಲೆ ಆಕ್ರೋಶ ವ್ಯಕ್ತಪಡಿಸಿದ ಕುರಿತು ಬಿಜೆಪಿ ಶಾಸಕ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ನೀವು ಹತಾಶರಾಗಿ ಈ ರೀತಿ ವರ್ತನೆ ಮಾಡುತ್ತಿರುವಿರಿ, ಇದು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ನಿಮ್ಮ ಹಾಗೂ ರಾಜ್ಯದ ಆರೋಗ್ಯದ ದೃಷ್ಟಿಯಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಟಿ. ರವಿ, ಲೋಕಸಭೆ ಚುನಾವಣೆಯ ಫಲಿತಾಂಶದಿಂದ ಸಿಎಂ ಪಾಠ ಕಲಿತಿಲ್ಲ. ಸಿಂಗಲ್ ನಂಬರ್ ಕೂಡ ಅವರಿಗೆ ಬೇಕಾಗಿಲ್ಲಿ ಅಂತ ಅನ್ನಿಸುತ್ತದೆ. ಹೀಗಾಗಿ ಸಿಎಂ ಹೀಗೆಲ್ಲ ಮಾತನಾಡಿದ್ದಾರೆ. ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಅವರು ತಮ್ಮ ಮಗನಿಗೆ ರಾಜೀನಾಮೆ ನೀಡುವ ಸಲಹೆ ನೀಡಲಿ. ಈ ಮೂಲಕ ಸಿಎಂ ರಾಜ್ಯದ ಜನರ ಹಿತ ಕಾಪಾಡಲಿ ಎಂದು ಹೇಳಿದರು.

 

ಫ್ರೆಶ್ ನ್ಯೂಸ್

Latest Posts

Featured Videos