ಏರ್ ಪೋರ್ಟ್ ಚಾಲಕರಿಂದ ಐಟಿ ದಾಳಿ  ಬಗ್ಗೆ ಅರಿತುಕೊಂಡ ಸಿಎಂ..!

ಏರ್ ಪೋರ್ಟ್ ಚಾಲಕರಿಂದ ಐಟಿ ದಾಳಿ  ಬಗ್ಗೆ ಅರಿತುಕೊಂಡ ಸಿಎಂ..!

ಬೆಂಗಳೂರು, ಮಾ, 28, ನ್ಯೂಸ್ ಎಕ್ಸ್ ಪ್ರೆಸ್: ಸಾಧಾರಣವಾಗಿ ಸರ್ಕಾರಿ ಅಧಿಕಾರಿಗಳ ದಾಳಿ ವಿಚಾರ ಗೌಪ್ಯವಾಗಿರುತ್ತದೆ. ಅದರಲ್ಲೂ ಕೇಂದ್ರ ಸರ್ಕಾರ ನಿಯಂತ್ರಣದಲ್ಲಿರುವ ಸಂಸ್ಥೆಗಳು ನಡೆಸುವ ದಾಳಿ ಗೌಪ್ಯವಾಗಿದ್ದು ರಾಜ್ಯ ಸರ್ಕಾರಕ್ಕೆ ತಿಳಿಸಿ ದಾಳಿ ನಡೆಸುವುದಿಲ್ಲ. ಆದರೆ ಸಿಎಂ ಮೊದಲೇ ದಾಳಿ ನಡೆಯಲಿದೆ ಎಂದು ಭವಿಷ್ಯ ನುಡಿದಾಗ ತೆರಿಗೆ ಇಲಾಖೆಯಲ್ಲೇ ಯಾರೋ ಸಿಎಂಗೆ ಮಾಹಿತಿ ನೀಡಿದ್ದಾರಾ ಎನ್ನುವ ಪ್ರಶ್ನೆ ಎದ್ದಿತ್ತು. ಆದರೆ ಈಗ ವಿಮಾನ ನಿಲ್ದಾಣದಲ್ಲಿರುವ ಚಾಲಕರು ಸಿಎಂಗೆ ಮಾಹಿತಿ ನೀಡಿದ್ದಾರೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ವಿಮಾನ ನಿಲ್ದಾಣದಲ್ಲಿರುವ ಕಾರು ಚಾಲಕರ ಪೈಕಿ ಯಾರೊ ಒಬ್ಬರು ಸಿಎಂ ಆಪ್ತರಿಗೆ ಕರೆ ಮಾಡಿ, ಸಿಆರ್‌ಪಿಎಫ್‌ನ 2 ತುಕಡಿಗಳು ಬೆಂಗಳೂರಿಗೆ ಬಂದಿವೆ. ಅವರು ಇಲ್ಲಿ 100 ಟ್ಯಾಕ್ಸಿಗಳನ್ನು ಒಟ್ಟಿಗೆ ಬಾಡಿಗೆಗೆ ತೆಗೆದುಕೊಳ್ಳುತ್ತಿದ್ದಾರೆ. ನಮಗೆ ಸೂಕ್ತ ಮಾಹಿತಿ ಲಭ್ಯವಾಗುತ್ತಿಲ್ಲ. ನೀವೇ ಚೆಕ್ ಮಾಡಿಕೊಳ್ಳಿ ಎಂದು ತಿಳಿಸಿದ್ದರಂತೆ. ತಕ್ಷಣವೇ ಎಚ್ಚೆತ್ತುಕೊಂಡ ಕುಮಾರಸ್ವಾಮಿ ಅವರು, ಗುಪ್ತಚರ ಇಲಾಖೆಯ ಅಧಿಕಾರಿಗಳಿಗೆ ಕರೆ ಮಾಡಿ ಫುಲ್ ಕ್ಲಾಸ್ ತೆಗೆದುಕೊಂಡಿದ್ದರು. ನೀವು ಏನ್ ಮಾಡುತ್ತಿದ್ದೀರಿ ಪರಿಶೀಲನೆ ಮಾಡಿ ಕೂಡಲೇ ಮಾಹಿತಿ ನೀಡಿ ಎಂದು ತಾಕೀತು ಮಾಡಿದ್ದರು.

ಸಿಎಂ ಸೂಚನೆಯಿಂದ ಎಚ್ಚೆತ್ತುಕೊಂಡು ಗುಪ್ತಚರ ಇಲಾಖೆಯು ಪರಿಶೀಲನೆ ಆರಂಭಿಸಿತ್ತು. ಈ ವೇಳೆ ಗುಪ್ತಚರ ಇಲಾಖೆಗೆ ಐಟಿ ದಾಳಿಯ ಮಾಹಿತಿ ಲಭ್ಯವಾಗಿದೆ. ಅಷ್ಟೇ ಅಲ್ಲದೆ ವಿವಿಧ ನಾಯಕರ ಮನೆಯ ಮೇಲೆ ದಾಳಿ ಮಾಡಲು ಐಟಿ ಅಧಿಕಾರಿಗಳು 200 ಕ್ಯಾಬ್ ಬುಕ್ ಮಾಡಿರುವುದು ತಿಳಿದಿದೆ. ತಕ್ಷಣವೇ ಸಿಎಂಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.

ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದು ಮಂಡ್ಯದಲ್ಲಿ ಬುಧವಾರ ಸುದ್ದಿಗೋಷ್ಠಿದ ಮಾತನಾಡಿದ್ದ ಸಿಎಂ, ಐಟಿ ಅಧಿಕಾರಿಗಳಿಗೆ ಜೆಡಿಎಸ್, ಕಾಂಗ್ರೆಸ್ ನಾಯಕರೇ ಟಾರ್ಗೆಟ್ ಆಗಿದ್ದು, ಒಬ್ಬರಿಗೆ ಅನುಕೂಲ ಮಾಡಿಕೊಳ್ಳಲು ದಾಳಿಗೆ ಸಿದ್ಧತೆ ನಡೆಸಲಾಗಿದೆ. ಬಿಜೆಪಿಯ ಆಪ್ತ ಮೂಲಗಳಿಂದ ನನಗೆ ಫೋನ್ ಕರೆ ಬಂದಿದ್ದು, ಕಾಂಗ್ರೆಸ್, ಜೆಡಿಎಸ್ ಅಭಿಮಾನಿಗಳನ್ನು ಗುರಿ ಮಾಡಿ ದಾಳಿ ನಡೆಸಲು ಸಿದ್ಧತೆ ನಡೆಸಲಾಗಿದೆ. ಪಕ್ಷ ಬೆಂಬಲಿಗರ ಮೇಲೆ ದಾಳಿ ನಡೆಸಿ ಎಷ್ಟು ಹಣ ತೆಗೆದುಕೊಂಡು ಹೋಗುತ್ತಾರೆ ನೋಡುತ್ತೇನೆ. ಆದರೆ ನಮ್ಮ ಮೇಲೆ ದಬ್ಬಾಳಿಕೆ ನಡೆಸಿದರೆ ನಾನು ಕೂಡ ಪಶ್ಚಿಮ ಬಂಗಾಳ ಸಿಎಂರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos