ಬೆಂಗಳೂರು, ಮೇ. 4, ನ್ಯೂಸ್ ಎಕ್ಸ್ ಪ್ರೆಸ್: 2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಫಲಿತಾಂಶದ ಕುರಿತಾಗಿ ಗುಪ್ತಚರ ಇಲಾಖೆಯಿಂದ ಸಲ್ಲಿಕೆಯಾಗಿರುವ ವರದಿಗಳು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ನೆಮ್ಮದಿಗೆ ಭಂಗ ತಂದಿವೆ ಎಂದು ಹೇಳಲಾಗಿದೆ.
ನಿಖಿಲ್ ಕುಮಾರ್ ಭಾರೀ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮೊದಲಿಗೆ ಗುಪ್ತಚರ ಇಲಾಖೆ ವರದಿ ನೀಡಿತ್ತು ಎನ್ನಲಾಗಿದೆ. ಬಳಿಕ 2ನೇ ವರದಿಯಲ್ಲಿ ನಿಖಿಲ್ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ತಿಳಿಸಲಾಗಿತ್ತು. ನಂತರದಲ್ಲಿ ನಿಖಿಲ್ ಗೆಲುವು ಕಷ್ಟವಾಗಿದ್ದು, ಗೆಲ್ಲುವ ಸಾಧ್ಯತೆ ಶೇ. 50 ರಷ್ಟು ಇದೆ. ಯಾರೇ ಗೆದ್ದರೂ ಕಡಿಮೆ ಅಂತರದಲ್ಲಿ ಗೆಲುವು ಸಾಧಿಸಬಹುದು ಎಂದು ವರದಿ ನೀಡಲಾಗಿದೆ ಎಂದು ಹೇಳಲಾಗಿದೆ.
ಮತದಾನ ಪೂರ್ವ ಮತ್ತು ಮತದಾನದ ಬಳಿಕ ಸಂಗ್ರಹಿಸಲಾದ ಗುಪ್ತಚರ ಮಾಹಿತಿಗಳ ವರದಿ ಪಡೆದುಕೊಂಡಿರುವ ಮುಖ್ಯಮಮಂತ್ರಿ ಕುಮಾರಸ್ವಾಮಿ ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗಿದೆ.