ಬೆಂಗಳೂರು, ಆ. 31: ಬೆಳಗಾವಿಯಲ್ಲಿ ಅಧಿವೇಶನ ನಡೆದರೆ ಇಡೀ ಆಡಳಿತ ಯಂತ್ರವೇ ಅಲ್ಲಿಗೆ ತೆರಳಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಕೂಡ ಭಾಗವಹಿಸುವುದರಿಂದ ಮುಂಗಡವಾಗಿಯೇ ಅಧಿವೇಶನ ನಡೆಸಲು ಬಿಜೆಪಿ ಸರ್ಕಾರ ತೀರ್ಮಾನಿಸಿದೆ ಎಂದು ಮೂಲ ತಿಳಿಸಿವೆ.
ಕುಂದಾ ನಗರಿ ಯಲ್ಲಿ ಅಕ್ಟೋಬರ್ ತಿಂಗಳ ಮಧ್ಯ ಭಾಗದಲ್ಲಿ ಬಿಜೆಪಿ ಸರ್ಕಾರ ಚಳಿಗಾಲ ಅಧಿವೇಶನ ನಡೆಸಲು ತೀರ್ಮಾನಿಸಿದೆ. ಡಿಸೆಂಬರ್ ತಿಂಗಳ ಎರಡನೇ ವಾರದಲ್ಲಿ 10 ದಿನಗಳ ಕಾಲ ಬೆಳಗಾವಿಯಲ್ಲಿರುವ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಸುವ ಮೂಲಕ ಪ್ರತ್ಯೇಕ ಕರ್ನಾಟಕದ ಕೂಗಿಗೆ ಕಡಿವಾಣ ಹಾಕಲಾಗಿತ್ತು.
ಸಿಎಂ ಬಿ.ಎಸ್.ಯಡಿಯೂರಪ್ಪ ಅಕ್ಟೋಬರ್ನಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಅಧಿಕಾರಿಗಳಿಗೆ ಸೂಚನೆ ಕೊಟ್ಟಿದೆ.