ಬೆಂಗಳೂರು: ಸುಹಾಸ್ ಶೆಟ್ಟಿ ಹತ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಸಂಚಲನವನ್ನೇ ಸೃಷ್ಟಿಸಿದ್ದು, ಇದೀಗ ಈ ಕೊಲೆ ಕೇಸ್ನಲ್ಲಿ ಎಂಟು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಇದೀಗ ಈ ಪ್ರಕರಣಕ್ಕೆ ಕುರಿತಂತೆ ಮಾಜಿ ಸಿಎಂ ಸದಾನಂದ ಗೌಡ ಅವರು ಪ್ರತಿಕ್ರಿಯೆಸಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಕೇಸ್ ಇದೊಂದು ಉದ್ದೇಶಪೂರ್ವಕವಾಗಿ ನಡೆದಿರುವಂತಹ ಘಟನೆಯಾಗಿದ್ದು ಈ ಕೇಸನ್ನು ಎನ್ಐಎಗೆ ವಹಿಸಬೇಕೆಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಯೋಗಿ ಎನಿಸಿಕೊಳ್ಳುವುದಕ್ಕಿಂತ ಉಪಯೋಗಿ ಎನಿಸಿಕೊಂಡರೆ ಬದುಕಿಗೆ ಹೆಚ್ಚು ಬೆಲೆ: ಡಿಕೆಶಿ
ಕರ್ನಾಟಕ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹೇಗೆ ಹದಗೆಟ್ಟಿದೆ ಎಂಬುದಕ್ಕೆ ಇದೊಂದು ಹಿಡಿದ ಕೈಗನ್ನಡಿ. ಒಂದೆರೆಡು ಕೇಸ್ ಅಲ್ಲ. ಬ್ಯಾಂಕ್ ದರೋಡೆ ಸೇರಿ ಅನೇಕ ಕೇಸ್ ಆಗಿವೆ. ಸರ್ಕಾರ ಕೊಲೆ ಮಾಡೋ ಇಂತಹವರಿಗೆ ಬೆಂಬಲ ಕೊಡುವ ರಾಜನೀತಿ ಮಾಡುತ್ತಿದೆ. ಹಿಂದೂಗಳನ್ನು 2ನೇ ದರ್ಜೆ ರೀತಿ ನೋಡುತ್ತಿದ್ದಾರೆ. ಪಾಕಿಸ್ತಾನ ಜಿಂದಾಬಾದ್ ಎನ್ನುತ್ತಾರೆ. ಯುದ್ಧ ಮಾಡಬೇಡಿ ಎನ್ನುತ್ತಾರೆ. ಇವತ್ತು ಹೋಗಿ ಗೃಹ ಸಚಿವರು ಸಭೆ ಮಾಡುತ್ತಿದ್ದಾರೆ. ಕೇವಲ ಮುಸ್ಲಿಂ ಸಂಘಟನೆಗಳನ್ನು ಕರೆದು ಸಭೆ ಮಾಡುತ್ತಿದ್ದಾರೆ. ಸ್ಥಳೀಯ ಶಾಸಕರನ್ನು ಕರೆದಿಲ್ಲ. ಇದು ಯಾವ ಸರ್ಕಾರದ ನೀತಿ ಎಂದು ಕಿಡಿಕಾರಿದರು.