ಆನೇಕಲ್, ಜ. 12 : ಅದು ತಮಿಳುನಾಡು ಗಡಿಗೆ ಹೊಂದಿಕೊಂಡಂತಿರುವ ಕೃಷಿ ಉದ್ದೇಶಿತ ಜಮೀನು. ಅಪರೂಪದ ಕೆಂಪು ಮಿಶ್ರಿತ ಮಣ್ಣು ಇಲ್ಲಿ ಹೇರಳವಾಗಿ ದೊರೆಯುತ್ತದೆ.
ಕೃಷಿಯ ಹೊರತು ಈ ಭೂಮಿಯನ್ನು ಬೇರೆ ಯಾವುದೇ ಕೆಲಸಕ್ಕೆ ಬಳಸಿಕೊಳ್ಳಲು ಅವಕಾಶವಿಲ್ಲ. ಆದರೆ, ಕೆಲವು ದಂಧೆಕೋರರು ಈ ಪ್ರದೇಶದಲ್ಲಿ ಆಕ್ರಮವಾಗಿ ಇಟ್ಟಿಗೆ ಘಟಕಗಳನ್ನು ಸ್ಥಾಪಿಸಿಕೊಂಡಿದ್ದು, ಫಲವತ್ತಾದ ಮಣ್ಣನ್ನು ಅವ್ಯಾಹತವಾಗಿ ಲೂಟಿ ಹೊಡೆಯುತ್ತಿದ್ದಾರೆ. ವಿಷಯ ತಿಳಿದಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ.