ಕೊಟ್ಟೂರು: ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ವಿಧಾನಸಭೆ ಕ್ಷೇತ್ರದ ತಾಲೂಕಿನ ಮಾಜಿ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯ, ವೀರಶೈವ ಮುಖಂಡರಾದ ಎಂ.ಎಂ.ಜೆ. ಹರ್ಷವರ್ಧನ್ ಹಾಗೂ ಎಪಿಎಂಸಿ ಮಾಜಿ ಅಧ್ಯಕ್ಷ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷ ನಾಯಕರಾದ ಶ್ರೀ ಸಿದ್ಧರಾಮಯ್ಯ, ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯಕ್ ಅವರ ಸಮ್ಮುಖ ಬೆಂಗಳೂರಿನಲ್ಲಿ ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಹರ್ಷವರ್ಧನ್, ಮಾಜಿ ಸಚಿವ ಸದ್ಯೋಜಾತ ಅವರ ಪುತ್ರರು. ಕಾಂಗ್ರೆಸ್ ಮುಖಂಡ ದ್ವಾರಕೀಶ್ ಇದ್ದರು.