ರಸ್ತೆ ಕಾಮಗಾರಿಗೆ ಶಾಸಕ ಚಾಲನೆ

ರಸ್ತೆ ಕಾಮಗಾರಿಗೆ ಶಾಸಕ ಚಾಲನೆ

ತಿಪಟೂರು, ಜ. 06: ವಿವೇಕಾನಂದ ನಗರ ಹಾಗೂ ರಂಗಾಪುರ ಸಂಪರ್ಕಿಸುವ ರಸ್ತೆಗೆ ಇಂದು ಶಾಸಕ ಬಿ ಸಿ ನಾಗೇಶ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.

ಇದೇ ವೇಳೆ ಮಾತನಾಡಿದ ಅವರು ತಿಪಟೂರಿನಿಂದ ರಂಗ ಪುರಕ್ಕೆ ಹೋಗುವ ಮಾರ್ಗದಲ್ಲಿ ಎರಡು ರಸ್ತೆಗಳು ಇದ್ದು, ಈ ಎರಡೂ ರಸ್ತೆಗಳು ಈಗಾಗಲೇ ಸರ್ಕಾರದ ವತಿಯಿಂದ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ವಾಹನಗಳ ದಟ್ಟಣೆ ಹಾಗೂ ಜನವಸತಿ ಪ್ರದೇಶಕ್ಕೆ ಯಾವುದೇ ತೊಂದರೆಯಾಗದಂತೆ ಎರಡು ಮಾರ್ಗಗಳನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು ಈಗಾಗಲೇ ಎರಡೂ ಮಾರ್ಗಗಳಿಗೂ ಗುದ್ದಲಿ ಪೂಜೆ ನೆರವೇರಿಸಿದೆ.

ಕೆಲವೇ ದಿನಗಳಲ್ಲಿ ಸಂಪೂರ್ಣವಾಗಿ ಸಾರ್ವಜನಿಕರ ಉಪಯೋಗಕ್ಕೆ ಬರಲಿದೆ ಎಂದು ತಿಳಿಸಿದ ಅವರು, ಈ ಭಾಗದ ಬಹು ದಿನಗಳ ಬೇಡಿಕೆಯಂತೆ ರಾಜ್ಯದ ನಾನಾ ಕಡೆಯಿಂದ ಜಿಲ್ಲೆಯ ಹಾಗೂ ತಾಲ್ಲೂಕಿನಾದ್ಯಂತ ರಂಗಾಪುರ ಶ್ರೀ ಕ್ಷೇತ್ರಕ್ಕೆ ಸಂಪರ್ಕಿಸುವ ಈ ರಸ್ತೆಯು ಅತ್ಯಂತ ಹೆಚ್ಚಿನ ದಟ್ಟಣೆಯಿಂದ ಕೂಡಿದ್ದು ಅಂತಹ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಭಾಗದಲ್ಲಿ ಎರಡು ರಸ್ತೆಗಳಿಗೆ ಕಾಯಕಲ್ಪ ಮಾಡಲಾಗುತ್ತಿದೆ ಎಂದು ತಿಳಿಸಿದರು. ಶೀಘ್ರದಲ್ಲೇ ರಸ್ತೆ ಕಾಮಗಾರಿ ಪ್ರಾರಂಭಗೊಂಡು ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ಇದೇ ವೇಳೆ ಅವರು ಹರ್ಷ ವ್ಯಕ್ತಪಡಿಸಿದರು.

ಕೇವಲ ಗಾಂಧಿನಗರ ರಸ್ತೆಗಳನ್ನು ಮಾತ್ರ ಅಭಿವೃದ್ಧಿ ಪಡಿಸದೆ ಈ ಭಾಗದಲ್ಲಿ ಬರುವ ಎಲ್ಲ ರಸ್ತೆಗಳನ್ನು ಈಗಾಗಲೇ ಟೆಂಡರ್ ಕರೆದಿದ್ದು, ಶೀಘ್ರವಾಗಿ ಈ ಎಲ್ಲ ರಸ್ತೆಗಳನ್ನು ಸಂಪೂರ್ಣವಾಗಿ ಮುಗಿಸಲು  ಕೆಲವು ದಿನಗಳಷ್ಟೇ ಎಂದರು. ಈ ತೊಂದರೆಯನ್ನು ಸಾರ್ವಜನಿಕರು ಅನುಭವಿಸಬೇಕಾಗಿ ಬಂದಿರುವುದು ವಿಷಾದನೀಯ ಎಂದು ತಿಳಿಸಿದರು. ಶೀಘ್ರದಲ್ಲೇ ಈ ಎಲ್ಲ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಮಾಜಿ ನಗರಸಭಾ ಸದಸ್ಯರಾದ ಹೋಬಳಿಯ ಲೋಕೇಶ್ ಎತ್ತಿನಹೊಳೆ ಯೋಜನೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos