ಬೆಂಗಳೂರು, ನ. 10 : ಕಾಗವಾಡ ವಿಧಾನಸಭಾ ಚುನಾವಣೆಯಲ್ಲಿ ಶ್ರೀಮಂತ್ ಪಾಟೀಲ್ ವಿರುದ್ಧ ಬಿಜೆಪಿ ನಾಯಕ ರಾಜು ಕಾಗೆ ಸೋತಿದ್ದರು.
ಕಾಂಗ್ರೆಸ್ನಿಂದ ಅನರ್ಹಗೊಂಡಿರುವ ಶ್ರೀಮಂತ್ ಪಾಟೀಲ್ ಇದೇ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎನ್ನಲಾಗಿದೆ. ರಾಜು ಕಾಗೆ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನುವ ಮಾತು ಕೇಳಿ ಬಂದಿದೆ. ಈ ವಿಚಾರವಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ಪಕ್ಷದ ಸಿದ್ದಾಂತ ಒಪ್ಪಿ ಯಾರು ಬೇಕಾದರೂ ಬರಲಿ ಎಂದಿದ್ದಾರೆ.