ವಿದ್ಯಾರ್ಥಿಗಳು ಸಮಯಪ್ರಜ್ಞೆ ಬೆಳೆಸಿಕೊಳ್ಳಲಿ

  • In State
  • January 11, 2021
  • 206 Views
ವಿದ್ಯಾರ್ಥಿಗಳು ಸಮಯಪ್ರಜ್ಞೆ ಬೆಳೆಸಿಕೊಳ್ಳಲಿ

ಚಾಮರಾಜನಗರ:  ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬೆಂಗಳೂರು ಇನ್‌ಫೋಸಿಸ್ ಫೌಂಡೇಷನ್ ಸಂಸ್ಥೆಯಿಂದ ಉಚಿತವಾಗಿ ನೀಡಿದ ಕಂಪ್ಯೂಟರ್ ಕೊಠಡಿಗಳ ಉದ್ಘಾಟನಾ ಸಮಾರಂಭ ನಡೆಯಿತು.
ಸಮಾರಂಭ ಉದ್ಘಾಟಿಸಿದ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಇಂದು ಪ್ರತಿಯೊಂದು ರಂಗದಲ್ಲೂ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತಿದೆ. ಇಂದು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರ ನಾನಾ ಸೌಲಭ್ಯಗಳನ್ನು ನೀಡುತ್ತಿದೆ. ವಿದ್ಯಾರ್ಥಿಗಳು ಸಮಯಪ್ರಜ್ಞೆ ಬೆಳೆಸಿಕೊಂಡು ಶಿಕ್ಷಣ ಪಡೆಯಬೇಕು. ಜಿಲ್ಲೆಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು, ಸ್ನಾತಕೋತ್ತರ ಕೇಂದ್ರ, ಮೆಡಿಕಲ್ ಕಾಲೇಜು, ಕೃಷಿವಿಜ್ಞಾನ ಕಾಲೇಜು, ಹಾಸ್ಟೆಲ್‌ಗಳ ಸೌಲಭ್ಯವಿದೆ. ಸರ್ಕಾರದ ಸವಲತ್ತನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು.
ಇದೇ ವೇಳೆ ಕಾಲೇಜು ಪ್ರಾಂಶುಪಾಲ ಮಾದೇಶ್ ಯುಪಿಎಸ್ ಉಪಕರಣ ಕೊಡಿಸಿಕೊಡಬೇಕು ಎಂದು ಶಾಸಕರಲ್ಲಿ ಮನವಿ ಮಾಡಿದರು. ಇನ್‌ಫೋಸಿಸ್ ಫೌಂಡೇಷನ್ ಸಂಸ್ಥೆಯ ಮಂಜುನಾಥ್, ಸಿಬ್ಬಂದಿ ಜಯಶಂಕರ್, ಉಪನ್ಯಾಸಕರು, ಸಿಬ್ಬಂದಿ ಇದ್ದರು.

ಫ್ರೆಶ್ ನ್ಯೂಸ್

Latest Posts

Featured Videos