ಮಾ,1.ನ್ಯೂಸ್ ಎಕ್ಸ್ ಪ್ರೆಸ್, ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರವರನ್ನ ಬಂಧಿಸುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತರೊಬ್ಬರು ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಮುಖ್ಯಮಂತ್ರಿ, ಪೊಲೀಸ್ ಮಹಾನಿರ್ದೇಶಕರಿಗೆ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಾಮಾಜಿಕ ಕಾರ್ಯಕರ್ತ ಹನುಮೇಗೌಡ ಈ ಪತ್ರವನ್ನು ಬರೆದಿದ್ದಾರೆ ಎಂದು ತಿಳಿದು ಬಂದಿದೆ.
ಸೈನಿಕರ ತ್ಯಾಗ, ಬಲಿದಾನವನ್ನು ಮೋದಿ ಅಲೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿಕೆ ನೀಡಿದ್ದಾರೆ. ಹೀಗಾಗಿ, ರಾಷ್ಟ್ರೀಯ ಬದ್ಧತೆಗೆ ಸಂಚಕಾರ ತರುವ ಹೇಳಿಕೆ ನೀಡಿದ ಯಡಿಯೂರಪ್ಪ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಯಡಿಯೂರಪ್ಪ ನವರಿಗೆ ಜೈಲು ಉಟ ಹಾಕಿಸಲೇಬೇಕು ಅಂತ ಟೀಕೆ ಮಾಡ್ಡಿದ್ದಾರೆ.