ಇಂದು ಬೆಂಗಳೂರಿನ ಹಲವು ಕಡೆ ಮದ್ಯ ಮಾರಾಟ ನಿಷೇಧ

ಇಂದು ಬೆಂಗಳೂರಿನ ಹಲವು ಕಡೆ ಮದ್ಯ ಮಾರಾಟ ನಿಷೇಧ

ಬೆಂಗಳೂರು: ಇಂದು ಐತಿಹಾಸಿಕ ಕರಗ ಮಹೋತ್ಸವ ನಮ್ಮ ಸಿಲಿಕಾನ್‌ ಸಿಟಿಯಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿನ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಆದೇಶ ಹೊರಡಿಸಿದ್ದಾರೆ.

ಇಂದು ಬೆಂಗಳೂರು ಕರಗ ಉತ್ಸವ ಮಾಹೋತ್ಸವ ನಡೆಯಲಿದೆ, ಇಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗಿದೆ ಎಂದಿದ್ದಾರೆ.

ಕರಗ ಮಹೋತ್ಸವದ ವೇಳೆಯಲ್ಲಿ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯ ಎಸಗೋ ಸಾಧ್ಯತೆ ಇದೆ. ಹೀಗಾಗಿ ನಗರದ ನಾಲ್ಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ಈ ಆದೇಶ ಮಾಡಿರೋದಾಗಿ ಹೇಳಿದ್ದಾರೆ.

ಇಂತಹ ಸ್ಥಳಗಳಲ್ಲಿ ವಿಲ್ಸನ್ ಗಾರ್ಡನ್, ಎಸ್ ಜೆ ಪಾರ್ಕ್, ಹಲಸೂರು ಗೇಟ್ ಪೊಲೀಸ್ ಠಾಣೆ ಹಾಗೂ ಎಸ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐತಿಹಾಸಿಕ ಕರಗ ಮಹೋತ್ಸವದಂದು ಮದ್ಯ ಮಾರಾಟ ನಿಷೇಧ ಮಾಡಿ ಆದೇಶಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos