ಲಾಕ್‌ಡೌನ್  ಅನಿವಾರ್ಯ : ಡಿಕೆ ಸುರೇಶ

ಲಾಕ್‌ಡೌನ್  ಅನಿವಾರ್ಯ : ಡಿಕೆ ಸುರೇಶ

ಬೆಂಗಳೂರು:  ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರ ಸಹೋದರ ಡಿಕೆ ಸುರೇಶಕುಮಾರ ಲಾಕ್ ಡೌನ್ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿರುವ ಹಿನ್ನಲೆ ಮಾತನಾಡಿ, ಬೆಂಗಳೂರಿನಲ್ಲಿ ಸೋಂಕು ನಿಯಂತ್ರಣ ಮೀರುತ್ತಿದೆ. ಇಂಥ ಸಂದರ್ಭದಲ್ಲಿ ಲಾಕ್‌ಡೌನ್ ಅನಿವಾರ್ಯ ಎಂದು ಸಂಸದ ಡಿ.ಕೆ ಸುರೇಶ್ ತಮ್ಮ ಟ್ವೀಟ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಂಕು ಹರಡುತ್ತಿರುವ ವೇಗ ನೋಡಿದರೆ ಬೆಂಗಳೂರಿಗೆ ಲಾಕ್‌ಡೌನ್ ಅಗತ್ಯವಿದೆ. ಆಡಳಿತ ಸರ್ಕಾರ ಕೊರೋನಾ ಹತೋಟಿಗೆ ತರಲು ಎಲ್ಲಾ ಹಂತದಲ್ಲೂ ವಿಫಲವಾಗಿದೆ. ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos