ರೋಹಿತ್ ತಿವಾರಿ ನಿಗೂಢ ಸಾವು!

ರೋಹಿತ್ ತಿವಾರಿ ನಿಗೂಢ ಸಾವು!

ನವದೆಹಲಿ, ಏ. 17, ನ್ಯೂಸ್ ಎಕ್ಸ್ ಪ್ರೆಸ್: ಉತ್ತರ ಪ್ರದೇಶ ಮಾಜಿ ಸಿಎಂ ಎನ್.ಡಿ ತಿವಾರಿ ಅವರೇ ನನ್ನ ತಂದೆ ಎಂಬುದನ್ನು ಸಾಬೀತುಪಡಿಸಲು ಕಳೆದ 6 ವರ್ಷಗಳಿಂದ ಕಾನೂನು ಹೋರಾಟ ನಡೆಸಿದ್ದ ರೋಹಿತ್ ಶೇಖರ್ ತಿವಾರಿ ಅವರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ.

ರೋಹಿತ್ ತಿವಾರಿ ಅವರ ಮೂಗಿನಲ್ಲಿ ರಕ್ತ ಸುರಿಯುತ್ತಿತ್ತು. ಈ ಹಿನ್ನೆಲೆಯಲ್ಲಿ ನೆನ್ನೆ ಸಂಜೆ 5 ಗಂಟೆಗೆ ರೋಹಿತ್ ಅವರನ್ನು ಆಯಂಬುಲೆನ್ಸ್ ಮೂಲಕ ಮ್ಯಾಕ್ಸ್ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ಅಷ್ಟೊತ್ತಿಗಾಗಲೇ ರೋಹಿತ್ ಕೊನೆಯುಸಿರೆಳೆದಿದ್ದರು ಎಂದು ವೈದ್ಯರು ತಿಳಿಸಿದ್ದಾರೆ.

ಅನಾರೋಗ್ಯದಿಂದಾಗಿ ಮ್ಯಾಕ್ಸ್ ಆಸ್ಪತ್ರೆಯಲ್ಲೇ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ರೋಹಿತ್ ಅವರ ತಾಯಿಗೂ ಪುತ್ರ ಸಾವನ್ನೋಪ್ಪಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಉಜ್ವಲಾ ಮತ್ತು ತಿವಾರಿ ನಡುವಿನ ಸಂಬಂಧದಲ್ಲಿ ಶೇಖರ್ ಜನಿಸಿದ್ದರು. ಆದರೆ ತಿವಾರಿ ಇದನ್ನು ಬಹಿರಂಗವಾಗಿ ಒಪ್ಪಿರಲಿಲ್ಲ. ಈ ಕುರಿತು 2008ರಲ್ಲಿ ಶೇಖರ್ ಕಾನೂನು ಹೋರಾಟ ಆರಂಭಿಸಿದ್ದರು. ಈ ಹಿನ್ನೆಲೆಯಲ್ಲಿ ಶೇಖರ್ ಹೇಳಿಕೆ ಸತ್ಯಾಸತ್ಯತೆ ಪರೀಕ್ಷೆಗಾಗಿ ನ್ಯಾಯಾಲಯ ಡಿಎನ್ಎ ಪರೀಕ್ಷೆಗೆ ಆದೇಶಿಸಿತ್ತು.

ಫ್ರೆಶ್ ನ್ಯೂಸ್

Latest Posts

Featured Videos