ಬೆಂಗಳೂರು: ಬಿಗ್ಬಾಸ್ ಮನೆಯಲ್ಲಿ ಇಡೀ ವಾರ ಬಿಗ್ಬಾಸ್ ಮನೆಯ ಸದಸ್ಯರು ಶಾಲೆಯಲ್ಲಿ ಮಕ್ಕಳಾಗಿ ನಲಿದಿದ್ದರು. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಹೊರತುಪಡಿಸಿದರೆ, ಯಾವುದೇ ಜಗಳಗಳಿಲ್ಲದೆ, ಅನಾಹುತಗಳಿಲ್ಲದೆ ಸುವ್ಯವಸ್ಥಿತವಾಗಿಯೇ ಕಳೆಯಿತು.
ರಾಗಿ ಹಿಟ್ಟನ್ನು ನೋಡಿ, ಪ್ರತಾಪ್ಗೆ ಯಾಕೋ ಮುದ್ದೆ ತಿನ್ನುವ ಮನಸ್ಸಾಗಿದೆ. ‘ಯಾರಿಗೆಲ್ಲ ಮುದ್ದೆ ಬೇಕು?’ ಎಂದು ಮನೆಯ ಸದಸ್ಯರನ್ನು ಕೇಳಿದ್ದಾರೆ. ಕಾರ್ತಿಕ್, ‘ತಿಂತೀನಿ ಕಣೋ ಮಾಡೋ’ ಎಂದು ಪ್ರತಾಪ್ಗೆ ಪ್ರೋತ್ಸಾಹ ಕೊಟ್ಟಿದ್ದಾರೆ. ತುಕಾಲಿ ಅವರೂ, ‘ಮಾಡೋದ್ ಮಾಡ್ತಿದೀಯಾ. ಸ್ವಲ್ಪ ದಪ್ಪ ಮಾಡೋ’ ಎಂದು ಕೇಳಿದ್ದಾರೆ. ಪ್ರತಾಪ್ ಉತ್ಸಾಹದಿಂದಲೇ ಎಲ್ಲರಿಗೂ ಮುದ್ದೆ ಮಾಡಿ ಬಡಿಸಿದ್ದಾರೆ. ಎಲ್ಲರೂ ಖುಷಿಯಿಂದ ತಿಂದಿದ್ದಾರೆ ಕೂಡ.
ಆದರೆ ಮಧ್ಯದಲ್ಲಿ ಎಲ್ಲೋ ತಾಳ ತಪ್ಪಿದೆ. ಮನೆಯ ಗ್ಯಾಸ್ ನಿಂತುಹೋಗಿದೆ. ‘ಮಾಡಿರೋ ಜವಾಬ್ದಾರಿ ನಾನು ಹೊತ್ಕೋತೀನಿ’ ಎಂದು ಪ್ರತಾಪ್ ಹೇಳಿದ್ರೂ ನಮ್ರತಾ, ‘ಮನೆಗೆ ಶಿಕ್ಷೆಯಾದ್ರೆ ನೀನೇನ್ ಮಾಡ್ತೀಯಾ?’ ಎಂದು ಕೇಳಿದ್ದಾರೆ. ಪ್ರತಾಪ್ ಕ್ಯಾಮೆರಾ ಎದುರಿಗೆ ಹೋಗಿ, ‘ಬಿಗ್ಬಾಸ್ ದಯವಿಟ್ಟು ಕೊಟ್ಬಿಡಿ ಬಿಗ್ಬಾಸ್’ ಎಂದು ಕೇಳಿಕೊಳ್ಳುತ್ತಿದ್ದಾರೆ. ಅತ್ತ ವಿನಯ್ ಕೋಪದಿಂದ, ‘ಇವಾಗ ಊಟ ಬರಬೇಕು ಅಷ್ಟೆ. ರಾತ್ರಿ ಊಟ ಆಗ್ಲಿಲ್ಲ ಅಂದ್ರೆ ದೇವ್ರಾಣೆ ನಾನ್ ಸುಮ್ನಿರಲ್ಲ’ ಎಂದು ಅವಾಜ್ ಹಾಕಿದ್ದಾರೆ.