ಮಾನ ಮರ್ಯಾದೆ ಇದ್ರೆ ಹೆಚ್ ಡಿಕೆ ರಾಜೀನಾಮೆ ನೀಡಲಿ: ಆರ್.ಆಶೋಕ್

ಮಾನ ಮರ್ಯಾದೆ ಇದ್ರೆ ಹೆಚ್ ಡಿಕೆ ರಾಜೀನಾಮೆ ನೀಡಲಿ: ಆರ್.ಆಶೋಕ್

ಬೆಂಗಳೂರು, ಮೇ. 25, ನ್ಯೂಸ್ ಎಕ್ಸ್ ಪ್ರೆಸ್: ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ಸಚಿವ ರೇವಣ್ಣ ತಾವು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಇದೀಗ ನಿಂಬೆಹಣ್ಣು ಇಟ್ಟು ಸಮಯ ನೋಡಿ ರಾಜೀನಾಮೆ ನೀಡಲಿ ಎಂದು ವ್ಯಂಗ್ಯವಾಡಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ವ್ಯಂಗ್ಯವಾಡಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಗೆ ಕಿಂಚಿತ್ತಾದ್ರೂ ಮಾನ ಮರ್ಯಾದೆ ಅನ್ನೋದು ಇದ್ರೆ ಈಗಲೇ ಲೋಕಸಭಾ ಚುನಾವಣೆ ಸೋಲಿಗೆ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು, “ರಾಜ್ಯದಲ್ಲಿ ಬಿಜೆಪಿ 25 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ರಾಜ್ಯದಲ್ಲಿ ಹೇಳಲು ಹೆಸರಿಲ್ಲದಂತಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಗುಡುಗಿದ ಆರ್. ಅಶೋಕ್, “ಸಿದ್ದರಾಮಯ್ಯನವರೂ ಸಮನ್ವಯತೆ ಇಲ್ಲದೆ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ್ರು, ಅವರೂ ಸಹ ಆ ಸ್ಥಾನದಲ್ಲಿ ಮುಂದುವರೆಯುವುದು ಸರಿಯಲ್ಲ ಹೀಗಾಗಿ ಮರ್ಯಾದೆ ಇದ್ರೆ ಅವರೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಚುನಾವಣಾ ಸಮಯದಲ್ಲಿ ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ ಎಲ್ಲರೂ ಮೋದಿಯನ್ನು ತೆಗಳಿದ್ರು. ಬಿಎಸ್ವೈ ವಿರುದ್ಧ ಕಳ್ಳರು, ಸುಳ್ಳರು, ಜೈಲಿಗೆ ಹೋಗಿ ಬಂದವರು ಅಂತ ಹೇಳಿ ತೆಗಳಿದ್ರು. ಆದರೆ, ಹೀಗೆ ಮಾತನಾಡಿದ ಮೈತ್ರಿ ನಾಯಕರ ಪುಟಗೋಸಿಯನ್ನು ರಾಜ್ಯದ ಜನ ಹರಿದುಹಾಕಿದ್ಧಾರೆ. ಇನ್ನಾದ್ರೂ ಬಿ.ಎಸ್. ಯಡಿಯೂರಪ್ಪ ಬಗ್ಗೆ ಅವರು ಗೌರವ ಕೊಟ್ಟು ಮಾತನಾಡಲಿ” ಎಂದು ತಾಕೀತು ಮಾಡಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos