ಮದಕರಿನಾಯಕ ಜಯಂತಿ ಆಚರಣೆ

ಮದಕರಿನಾಯಕ ಜಯಂತಿ ಆಚರಣೆ

ಪೀಣ್ಯ:ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಬಸವೇಶ್ವರ ನಗರದ ೩ಡಿಜ ಬ್ಲಾಕ್ ನಲ್ಲಿರುವ ಸಾಯಿಬಾಬಾ ಮಂದಿರ ಹತ್ತಿರ ಬೆಂಗಳೂರು ಮಹಾನಗರ ವಾಲ್ಮೀಕಿ ನಾಯಕ ಸಮುದಾಯದ ವತಿಯಿಂದ ಹಾಗೂ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಎಸ್ ಟಿ ಮೋರ್ಚಾ ಅಧ್ಯಕ್ಷ ಬಾಕ್ಸರ್ ನಾಗರಾಜ್ ಅವರ ನೇತೃತ್ವದಲ್ಲಿ ನಾಡ ದೊರೆ ರಾಜವೀರ ಮದಕರಿನಾಯಕ ಅವರ ೨೭೮ ನೆಯ ಜಯಂತೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿತ್ತು.
ಅಖಿಲ ಭಾರತ ವಾಲ್ಮೀಕಿ ಮಹಾಸಭಾದ ಅಧ್ಯಕ್ಷ ನಾಗರಾಜ ನಾಯಕ್ ರವರು , ಬೆಂಗಳೂರು ಜಲಮಂಡಳಿ ನಿವೃತ್ತ ಅಭಿಯಂತರ ಕೆಂಪರಾಮಯ್ಯ ಮತ್ತು ಶ್ರೀಧರ್ ಆಗಮಿಸಿ ಜ್ಯೊತಿಮದಕರಿನಾಯಕರ ಪೋಟೋ ಗೆ ಪುಷ್ಪ ಅರ್ಚನೆ ಮಾಡಿ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಂಡಲ ಅಧ್ಯಕ್ಷ ರಾಘವೇಂದ್ರ ಮಾತನಾಡಿ ನಮ್ಮ ಕ್ಷೇತ್ರದ ಎಲ್ಲ ಸಮಾಜದ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಮ್ಮ ಸಹಕಾರ ಇದೆ. ಮುಂದಿನ ದಿನಗಳಲ್ಲಿ ಸರ್ಕಾರ ನಿಮ್ಮ ಎಲ್ಲ ರೀತಿಯ ಬೇಡಿಕೆಗಳನ್ನು ಈಡೇರಿಸಲು ಸಚಿವರಾದ ಶ್ರೀ ಸುರೇಶ್ ಕುಮಾರ್ ಅವರಿಗೆ ತಲುಪಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.
ವಾಲ್ಮೀಕಿ ಸಮುದಾಯದ ಪರಿಶಿಷ್ಟ ಪಂಗಡದ ಜಿಲ್ಲಾ ವ್ಯವಸ್ಥಾಪಕ ಪರಮೇಶ್ವರ್ ಯರದಾಲ, ಚಲನಚಿತ್ರ ನಟರು, ನಿರ್ಮಾಪಕ, ನಿರ್ದೇಶಕ ಪಲ್ಲಕ್ಕಿ ರಾಧಾಕೃಷ್ಣ, ಬೆಂಗಳೂರು ದಕ್ಷಿಣ ಎಸ್ ಟಿ ಮೋರ್ಚಾ ಅಧ್ಯಕ್ಷ ರ ಆನೇಕಲ್ ನಾರಾಯಣ ಸ್ವಾಮಿ, ಮಹಾಲಕ್ಷ್ಮೀ ಲೇಔಟ್ ಎಸ್ ಟಿ ಮೋರ್ಚಾ ಅಧ್ಯಕ್ಷ ವಿನೋದ್ ಕುಮಾರ್ ಸೇರಿದಂತೆ ಹಲವು ಮುಖಂಡರುಗಳು ವಾಲ್ಮೀಕಿ ಸಮುದಾಯದ ಬಂಧುಗಳು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos