ರಾಯಚೂರು ಏ. 20, ನ್ಯೂಸ್ ಎಕ್ಸ್ ಪ್ರೆಸ್: ಜಿಲ್ಲೆಯ ನವೋದಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮಧು ಪತ್ತಾರ್ ಅತ್ಯಾಚಾರ, ಕೊಲೆ ಪ್ರಕರಣ, ಇಡೀ ರಾಜ್ಯವನ್ನೇ ಗಮನ ಸೆಳೆದಿದೆ. ಇಂತಹ ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಬೇಕು, ಅತ್ಯವಿದ್ದರೇ ಸಿಐಡಿ ತನಿಖೆಯನ್ನು ನಡೆಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಯಚೂರಿನ ಮಧು ಪತ್ತಾರ್ ಅವರ ಮನೆಗೆ ಇಂದು ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೃತ ಮಧು ಪತ್ತಾರ್ ಪೋಷಕರಿಗೆ ಸಾಂತ್ವಾನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಮಧು ಪತ್ತಾರ್ ಅವರ ಪೋಷಕರು ತಮ್ಮ ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಮನವಿ ಮಾಡಿದ್ದಾರೆ. ಬಾಲಕಿ ಸಾವಿನ ಬಗ್ಗೆ ಸೂಕ್ತ ತನಿಖೆಯಾಗಬೇಕು. ಒಟ್ಟಾರೆಯಾಗಿ ರಾಯಚೂರಿನ ಮಧು ಪತ್ತಾರ್ ಪ್ರಕರಣ ಇಡೀ ರಾಜ್ಯವೇ ರಾಯಚೂರಿನತ್ತ ನೋಡುವಂತೆ ಮಾಡಿದೆ.