ಮಧು ಪತ್ತಾರ್ ಹತ್ಯೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

ಮಧು ಪತ್ತಾರ್ ಹತ್ಯೆ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

ರಾಯಚೂರು, ಮೇ.2, ನ್ಯೂಸ್ ಎಕ್ಸ್ ಪ್ರೆಸ್: ರಾಯಚೂರಲ್ಲಿ ನಡೆದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣದ ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಲ್ಲಿನ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು ಪ್ರಕರಣದ ಆರೋಪಿಯನ್ನ ಕೋರ್ಟ್​ ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿಯು ಇಂದು ಆರೋಪಿಯನ್ನು ನಗರದ 3ನೇ ಜೆಎಂಎಫ್​ಸಿ ಕೋರ್ಟ್ ಎದುರು ಹಾಜರುಪಡಿಸಿತು. ಬಳಿಕ ನ್ಯಾಯಲಯವು ಆರೋಪಿ ಸುದರ್ಶನ ಯಾದವ್​ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿಯ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಿಐಡಿಯು ತಮ್ಮ ವಶದಲ್ಲಿದ್ದ ಆರೋಪಿಯನ್ನು ಕೋರ್ಟ್​ಗೆ ಹಾಜರುಪಡಿಸಿತ್ತು. ಇದೀಗ ನ್ಯಾಯಲಯವು ಮೇ 14ರವರೆಗೆ ಆರೋಪಿಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.

ಫ್ರೆಶ್ ನ್ಯೂಸ್

Latest Posts

Featured Videos