ಬೆಳ್ತಂಗಡಿ, ಅ.26 : ತಾಲೂಕಿನ ನೆರೆ ಹಾವಳಿಯಿಂದ ಹಾನಿಗೀಡಾದ ಪ್ರದೇಶಕ್ಕೆ ಶನಿವಾರ ಭೇಟಿ ನೀಡುವ ಮುನ್ನ ರಾಜ್ಯ ಸರಕಾರದ ಕಾನೂನು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರು ಇಂದು ಬೆಳಿಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಬಳಿಕ ನೆರೆ ಹಾವಳಿಯಿಂದ ಹಾನಿಗೀಡಾದ ಕುಕ್ಕಾವು ಸೇತುವೆ ಪ್ರದೇಶಕ್ಕೆ ಅಧಿಕಾರಿಗಳ ತಂಡದೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು.