ಮಗನ ಗೆಲುವಿಗೆ ಸಿಎಂ ರಣತಂತ್ರ

ಮಗನ ಗೆಲುವಿಗೆ ಸಿಎಂ ರಣತಂತ್ರ

ಮಂಡ್ಯ, ಮಾ. 27, ನ್ಯೂಸ್ ಎಕ್ಸ್ ಪ್ರೆಸ್ : ಬಿಜೆಪಿ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಪ್ರಬಲ ಸ್ಪರ್ಧೆ ನೀಡುತ್ತಿರುವ ಸುಮಲತಾ ಅಂಬರೀಶ್ ವಿರುದ್ಧ ಪುತ್ರ ನಿಖಿಲ್ ಕುಮಾರಸ್ವಾಮಿಯವರನ್ನು ಗೆಲ್ಲಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ರಣತಂತ್ರ ರೂಪಿಸುತ್ತಿದ್ದಾರೆ.

ಸುಮಲತಾ ಅಂಬರೀಶ್ ಅವರಿಗೆ ಸೆಡ್ಡು ಹೊಡೆಯುವಂತೆ ನಿಖಿಲ್ ನಾಮಪತ್ರ ಸಲ್ಲಿಕೆ ದಿನದಂದು ಭಾರಿ ಜನಸ್ತೋಮ ಸೇರಿಸಿದ್ದ ಬಳಿಕ ನಾಮಪತ್ರ ಸಲ್ಲಿಕೆ ಕಡೆಯ ದಿನದಂದು ಸುಮಲತಾ ಹೆಸರಿನ ಮತ್ತೆ 3 ಜನರನ್ನ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ಇಂದು ಮಂಡ್ಯಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಭೇಟಿ ನೀಡುತ್ತಿದ್ದು, ಸುಮಲತಾ ಅಂಬರೀಶ್ ಜೊತೆ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕೆಲ ಪ್ರಮುಖ ನಾಯಕರನ್ನು ಸೆಳೆಯಲಿದ್ದಾರೆನ್ನಲಾಗುತ್ತಿದೆ. ಅತ್ತ ಸುಮಲತಾ ಅಂಬರೀಶ್ ಕೂಡಾ ಯಾರಿಗು ಬಗ್ಗದೆ ಎದುರಾಳಿಗಳ ತಂತ್ರಕ್ಕೆ ಪ್ರತಿತಂತ್ರ ರೂಪಿಸುತ್ತಿದ್ದು, ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ರಾಷ್ಟ್ರಮಟ್ಟದಲ್ಲೂ ಗಮನ ಸೆಳೆದಿದೆ.

ಫ್ರೆಶ್ ನ್ಯೂಸ್

Latest Posts

Featured Videos