ಬೆಂಗಳೂರು, ಮಾ.28, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಯ ಕುರಿತು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ತಮ್ಮ ಮಗನಾದ ಬಿ.ವೈ. ರಾಘವೇಂದ್ರರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗದೆ ಬಿ.ಎಸ್ ಯಡಿಯೂರಪ್ಪ ವಾಪಸ್ಸಾಗಿದ್ದಾರ.
ಇಂದು ನಗರದ ಜಕ್ಕೂರು ವಿಮಾನ ನಿಲ್ದಾಣದಿಂದ, ಬಿ.ವೈ ರಾಘವೇಂದ್ರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಎಸ್.ಎಂ ಕೃಷ್ಣ ಹಾಗೂ ಮಾಜಿ ಸಚಿವ ಶ್ರೀನಿವಾಸ್ ಜೊತೆ ಶಿವಮೊಗ್ಗಕ್ಕೆ ಹೊರಟಿದ್ದರು ಆದರೆ, ಕೊನೆ ಘಳಿಗೆಯಲ್ಲಿ ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಉಂಟಾಗಿದೆ. ಹಾಗಾಗಿ, ಶಿವಮೊಗ್ಗಕ್ಕೆ ಹೋಗಲು ಸಾಧ್ಯವಾಗದೆ ಬಿಜೆಪಿ ನಾಯಕರು ವಾಪಸ್ ಬೆಂಗಳೂರಿಗೆ ಬಂದಿದ್ದಾರೆ ಎಂದು ತಿಳಿದು ಬಂದಿದೆ.