ಮಗನಿಗಾಗಿ ಕುಮಾರಸ್ವಾಮಿ ಮತಬೇಟೆ

ಮಗನಿಗಾಗಿ ಕುಮಾರಸ್ವಾಮಿ ಮತಬೇಟೆ

ಮಂಡ್ಯ, ಏ. 10, ನ್ಯೂಸ್ ಎಕ್ಸ್ ಪ್ರೆಸ್: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದು ಪ್ರತ್ಯೇಕವಾಗಿ ಚುನಾವಣಾ ಪ್ರಚಾರ ನಡೆಸಿದರು.

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಪುತ್ರ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಪರವಾಗಿ ರೋಡ್ಶೋ ನಡೆಸುವ ಮೂಲಕ ಬಿರುಸಿನ ಪ್ರಚಾರವನ್ನು ಕೈಗೊಂಡರು.

ಇಂದು ಬೆಳಗ್ಗೆ ಕೆಆರ್ಎಸ್ನಿಂದ ಚುನಾವಣಾ ಪ್ರಚಾರ ಆರಂಭಿಸಿದ ಮುಖ್ಯಮಂತ್ರಿಗೆ ಅದ್ಧೂರಿ ಸ್ವಾಗತ ಕೋರಲಾಯಿತು.

ಮಹದೇವಪುರ, ಮಂಡ್ಯ ಕೊಪ್ಪಲು, ಅರಕೆರೆ, ಕೊತ್ತತ್ತಿ, ಬೆಳಗೊಳ, ಪಾಲಹಳ್ಳಿ, ಶ್ರೀರಂಗಪಟ್ಟಣ, ಬಾಬುರಾಯನಕೊಪ್ಪಲು, ಸೇರಿದಂತೆ ಹಲವು ಗ್ರಾಮಗಳಲ್ಲಿ ಚುನಾವಣಾ ಪ್ರಚಾರ ಕೈಗೊಂಡು ಏ.18 ರಂದು ನಡೆಯುವ ಮತದಾನದಂದು ನಿಖಿಲ್ಗೆ ಮತ ನೀಡುವಂತೆ ಮನವಿ ಮಾಡಿದರು.

ತೆರೆದ ವಾಹನದಲ್ಲಿ ರೋಡ್ಶೋ ನಡೆಸುವ ಮೂಲಕ ಮತದಾರರ ಮನ ಸೆಳೆಯುವ ಪ್ರಯತ್ನವನ್ನು ಮಾಡಿದರು.

ಫ್ರೆಶ್ ನ್ಯೂಸ್

Latest Posts

Featured Videos