ಮೈಸೂರು, ಮಾ.29, ನ್ಯೂಸ್ ಎಕ್ಸ್ ಪ್ರೆಸ್: ಚುನಾವಣೆ ಇರುವ ವೇಳೆಯಲ್ಲೇ ಈ ರೀತಿ ದಾಳಿ ನಡೆಸಿರುವುದು ರಾಜಕೀಯ ಪ್ರೇರಿತ. ಈ ರಾಜಕೀಯ ಪ್ರೇರಿತ ದಾಳಿಗೆ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡಲಿದ್ದಾರೆ ಎಂದು ಸಚಿವ ಸಾ.ರಾ ಮಹೇಶ್ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಐಟಿ ದಾಳಿ ಮಾಡಿ ನಮ್ಮ ಪಕ್ಷವನ್ನು ಕುಗ್ಗಿಸಲು ಯತ್ನಿಸುತ್ತಿದ್ದಾರೆ. ಆದರೆ ಅದು ಸಾಧ್ಯವಾಗುವುದಿಲ್ಲ. ಕೇಂದ್ರ ಸರ್ಕಾರ ನ್ಯಾಯ ಸಮ್ಮತವಾಗಿ ದಾಳಿ ನಡೆಸಲಿ. ನಮ್ಮ ಪಕ್ಷದ ಬಲ ಇರುವ ಮೈಸೂರು ಮಂಡ್ಯ, ಹಾಸನ ಹಾಗೂ ಮಂಗಳೂರಿನಲ್ಲಿ ದಾಳಿ ನಡೆಸಿರುವುದು ರಾಜ್ಯ ಹಾಗೂ ಬಿಜೆಪಿಯ ರಾಷ್ಟೀಯ ನಾಯಕರಿಗೆ ಶೋಭೆ ತರುವಂತಹದ್ದಲ್ಲ ಎಂದರು.