‘ಮೈತ್ರಿ ಸರ್ಕಾರ’ ಬೀಳಿಸಲು ಕಾಂಗ್ರೆಸ್ ನಿಂದಲೇ ‘ಪ್ಲಾನ್’

‘ಮೈತ್ರಿ ಸರ್ಕಾರ’ ಬೀಳಿಸಲು ಕಾಂಗ್ರೆಸ್ ನಿಂದಲೇ ‘ಪ್ಲಾನ್’

ತುಮಕೂರು, ಮೇ, 7. ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಸಮ್ಮಿಶ್ರ ಸರ್ಕಾರ ಬೀಳಿಸಲು ಕಾಂಗ್ರೆಸ್ ನವರು ಪ್ಲಾನ್ ಮಾಡಿದ್ದಾರೆ. ಮೇ 23ರ ಬಳಿಕ ಎಲ್ಲವೂ ಬಹಿರಂಗವಾಗಲಿದೆ ಎಂದು ಮಾಜಿ ಶಾಸಕ ಸುರೇಶ್ ಗೌಡ ಹೇಳಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನವರು ಮಾಜಿ ಪ್ರಧಾನಿ ದೇವೇಗೌಡರನ್ನು ಸೋಲಿಸಲಿದ್ದಾರೆ ಎಂದು ಭವಿಷ್ಯ ಹೇಳಿದ್ದಾರೆ.

ಕುಟುಂಬ ರಾಜಕಾರಣಕ್ಕೆ ಹೆದರಿ ದೇವೇಗೌಡರನ್ನು ಕಾಂಗ್ರೆಸ್ ಮತ್ತು ಜೆಡಿಎಸ್ ನವರು ಸೋಲಿಸಲಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ನವರು ಬಿಜೆಪಿಗೆ ಮತ ಹಾಕಿದ್ದು, ಬಿಜೆಪಿ ತುಮಕೂರಿನಲ್ಲಿ ಜಯ ಗಳಿಸಲಿದೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕೆಲವು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ದೇವೇಗೌಡರ ದಿಕ್ಕು ತಪ್ಪಿಸಿದ್ದಾರೆ. ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಗೌಡರನ್ನು ಗೆಲ್ಲಿಸಲು ಪ್ರಯತ್ನ ಮಾಡಿಲ್ಲ. ಅದೇ ರೀತಿ ಜೆಡಿಎಸ್ ಶಾಸಕರು 1 ರೂಪಾಯಷ್ಟು ಕೆಲಸವನ್ನು ಮಾಡಿಲ್ಲ ಎಂದು ಟೀಕಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos