ಮಾಜಿ ಶಾಸಕ ಶಿವರಾಜ್ ತಂಗಡಗಿ ಬಿಜೆಪಿ ವಿರುದ್ಧ ವಾಗ್ದಾಳಿ

ಮಾಜಿ ಶಾಸಕ ಶಿವರಾಜ್ ತಂಗಡಗಿ ಬಿಜೆಪಿ ವಿರುದ್ಧ ವಾಗ್ದಾಳಿ

ಕೊಪ್ಪಳ, ಮಾ. 29, ನ್ಯೂಸ್ ಎಕ್ಸ್ ಪ್ರೆಸ್: ನಮ್ಮ ಕರ್ನಾಟಕದಲ್ಲಿ ಸದ್ಯ ಕಾಂಗ್ರೆಸ್ ಗೆ ಒಳ್ಳೆ ವಾತಾವರಣವಿದೆ. ಇದನ್ನು ಕುಗ್ಗಿಸಲು ಮೋದಿ ಸರ್ಕಾರ ಐಟಿ ದಾಳಿಯಂತಹ ತಂತ್ರ ರೂಪಿಸುತ್ತಿದೆ ಎಂದು ಮಾಜಿ ಶಾಸಕ ಶಿವರಾಜ್ ತಂಗಡಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಮುಖಂಡರ ಸಭೆ ಬಳಿಕ ಮಾತನಾಡಿದ ಅವರು, ಇದು ರಾಜಕೀಯ ಪ್ರೇರಿತ ರೇಡ್, ಇದಕ್ಕೆಲ್ಲ ನಾವ್ಯಾರೂ ಕುಗ್ಗುವುದಿಲ್ಲ. ಸಂದರ್ಭ ಬಂದಾಗ ಉತ್ತರ ಕೊಡುತ್ತೇವೆ. ಸಂವಿಧಾನವಿದೆ. ಕಾನೂನು ಇದೆ. ತಕ್ಕ ಉತ್ತರ ಕೊಡುತ್ತೇವೆ ಎಂದರು.

ಸರ್ಜಿಕಲ್ ಸ್ಟ್ರೈಕ್ ಹೆಸರಿನಲ್ಲಿ ಸೈನಿಕರನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ. ವಿಜ್ಞಾನಿಗಳು ಮಾಡಿದ ಸಾಧನೆಯನ್ನು ಮೋದಿ ಹಾಗೂ ಅಮಿತ್ ಶಾ ಸಾಧನೆ ಎಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos