ಬೆಂಗಳೂರು, ಆ. 29: ರಾಜ್ಯದ ರಾಜಕೀಯದಲ್ಲಿ ದಿನೆ ದಿನೆ ಹಲವಾರು ಬದಾಲಾವಣೆಗಳು ನಡಿತಾನೆ ಇದೆ. ಹೌದು, ರಾಜ್ಯ ಬಿಜೆಪಿಯಲ್ಲಿ ಮೇಜರ್ ಸರ್ಜರಿಯಾಗಲಿದೆ ಎನ್ನಲಾಗುತ್ತಿದ್ದು, ಬಿಜೆಪಿಯಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎನ್ನುವ ಕಾರಣದಿಂದ ಹಾಗೂ ಪಕ್ಷ ಸಂಘಟನೆಯ ಹಿತ ದೃಷ್ಟಿಯಿಂದ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಯವರನ್ನು ವಿಮುಕ್ತಿಗೊಳಿಸಿ ಅವರ ಸ್ಥಾನಕ್ಕೆ ಹೊಸಬರನ್ನು ನೇಮಿಸಲಾಗುತ್ತಿದೆ ಎನ್ನಲಾಗಿದೆ.
ಇನ್ನು ಇದಲ್ಲದೇ ಅರವಿಂದ ಲಿಂಬಾವಳಿಯವರು ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯ ವೇಳೆಯಲ್ಲಿ ಸಚಿವರಾಗಿ ಅಧಿಕಾರ ಸ್ವೀಕಾರ ಮಾಡುವ ಹಿನ್ನಲೆಯಲ್ಲಿ ಅವರನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಅವರನ್ನು ಬಿಡುಗಡೆ ಮಾಡಲಾಗುವುದು ಎನ್ನಲಾಗಿದೆ. ಇನ್ನು ಸಿಎಂ ಬಿಎಸ್ ವೈ ಇಬ್ಬರು ಪುತ್ರರಲ್ಲಿ ಒಬ್ಬರಿಗೆ ಪ್ರಮುಖ ಹುದ್ದೆಯನ್ನು ನೀಡಲಾಗುತ್ತದೆ ಎನ್ನಲಾಗಿದೆ.