ಪುಣೆ, ಸೆ. 26 : ಮುಂಬೈ ಸೇರಿ ಮಹಾರಾಷ್ಟ್ರದ ವಿವಿಧ ಜಿಲ್ಲೆಗಳಲ್ಲಿ ಭಾರೀ ಆವಂತರ ಸೃಷ್ಟಿಸಿದ್ದ ಮಳೆಯ ಆರ್ಭಟ ಈಗ ಪುಣೆ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ರೌದ್ರಾವತಾರ ಮುಂದುವರೆಸಿದೆ. ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಮಳೆಗೆ ಪುಣೆ ಅಕ್ಷರಶಃ ತತ್ತರಿಸಿದ್ದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
ವರುಣಾರ್ಭಟದಿಂದ ಏಳು ಜನ ಮೃತಪಟ್ಟು ಕೆಲವರು ನಾಪತ್ತೆಯಾಗಿದ್ದಾರೆ. ಶಕರ್ ನಗರ್ ಬಳಿ ಗೋಡೆಯೊಂದು ಕುಸಿದು ಮಗು ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದೆ.