ಮಳೆಗಾಗಿ ಮಂಡೂಕನ ಮದುವೆ

     ಮಳೆಗಾಗಿ ಮಂಡೂಕನ ಮದುವೆ

ಮಡಿಕೇರಿ , ಜು.17 :  ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿಸಿದ ವಿಶೇಷ ಘಟನೆ ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಲ್ಲೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯಲ್ಲಿ ಬರಗಾಲದ ಛಾಯೆ ಎದ್ದು ಕಾಣುತ್ತಿದ್ದು ರೈತರು ವರುಣನ ಕೃಪೆಗಾಗಿ ಕಪ್ಪೆಗಳ ಮದುವೆ ಮಾಡಿ ಪ್ರಾರ್ಥನೆ ಸಲ್ಲಿಸಿದರು. ಮಾಡಿದ ವಿಶೇಷ ಘಟನೆ ನಡೆಯಿತು.

ಸಮೀಪದ ಹಳ್ಳದಿಂದ ಗಂಡು ಮತ್ತು ಹೆಣ್ಣುಕಪ್ಪೆಯನ್ನು ಹಿಡಿದು ತಂದ ರೈತರು ಜಮೀನೊಂದರ ಕೆಳಭಾಗದಲ್ಲಿ ಚಪ್ಪರ ನಿರ್ಮಿಸಿ ಸಿಂಗರಿಸಿ, ಎರಡು ಕಪ್ಪೆಗಳಿಗೆ ಶಾಸ್ತ್ರೋಕ್ತವಾಗಿ ಮದುವೆ ಮಾಡಿಸಿದರು. ಕಪ್ಪೆಗಳ ಮದುವೆಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ಕಪ್ಪೆಗಳ ಮದುವೆ ಮಾಡಿದ ನಂತರ ರೈತರು ಮಳೆಗಾಗಿ ಪ್ರಾರ್ಥಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos