ತುಮಕೂರು, ಆ.03 : ಶಿರಾ ತಾಲೂಕಿನ ದೊಡ್ಡ ಅಗ್ರಹಾರದ ಮುಸ್ಲಿಮರು ಗ್ರಾಮದ ಕೆರೆಯಂಗಳದಲ್ಲಿ ಮಳೆಗಾಗಿ ‘ದೋ ರಕಾತ್ ನಮಾಜ್’ ಮಾಡುವ ಮೂಲಕ ಪ್ರಾರ್ಥಿಸಿದರು.
ಶಿರಾದಲ್ಲಿ ಮುಂಗಾರು ವಿಫಲವಾಗಿ ನಾಡಿನಲ್ಲಿ ಬರದ ಛಾಯೆ ಮುಂದುವರೆದಿದ್ದು, ನಾಡಿನಲ್ಲಿ ಸುಭಿಕ್ಷವಾಗಿ ಮಳೆಯಾಗಿ, ಹೊಲಗಳಲ್ಲಿ ಸಮೃದ್ಧವಾದ ಬೆಳೆಯಾಗಲಿ ಎಂದು ಪ್ರಾರ್ಥಿಸಿ ಪ್ರಕೃತಿಗೆ ಯಾವುದೇ ಜಾತಿ ಧರ್ಮವಿಲ್ಲ. ಕರ್ತನ ಕರುಣೆಯ ಹೊನಲು ಹರಿದರೆ ದೇಶ ಸುಭಿಕ್ಷವಾಗಲು ಕ್ಷಣ ಸಾಕು. ಆತನ ಕರುಣೆಯ ಮಳೆಗಾಗಿ ಪ್ರಾರ್ಥಿಸಿ ಇಂದು ಗ್ರಾಮದ ಮುಸ್ಲಿಂ ಬಾಂಧವರೆಲ್ಲಾ ಸೇರಿ ಕೆರೆಯಂಗಳದಲ್ಲಿ ನಮಾಜ್ ಮಾಡಿದೆವು ಎಂದು ಮಸೀದಿಯ ಮೌಜನ್ ಸಬ್ದರ್ ಹುಸೇನ್ ತಿಳಿಸಿದರು.