ಮೋದಿಗೆ ಸವಾಲ್‌ ಹಾಕಿದ ಮಲ್ಲಿಕಾರ್ಜುನ ಖರ್ಗೆ!

ಮೋದಿಗೆ ಸವಾಲ್‌ ಹಾಕಿದ ಮಲ್ಲಿಕಾರ್ಜುನ ಖರ್ಗೆ!

ದೆಹಲಿ: ಸಂವಿಧಾನವನ್ನು ಬದಲಾಯಿಸಬೇಕು ಎಂದು ಕರ್ನಾಟಕದ ಸಂಚಿತ ಅನಂತ್ ಕುಮಾರ್ ಹೆಗ್ಡೆ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ತನ್ನ ವಾಗ್ದಾಳಿಯನ್ನು ಮುಂದುವರೆಸಿದೆ ನಿನ್ನೆ ದೆಹಲಿಯಲ್ಲಿ ಈ ಬಗ್ಗೆ ಮಾತನಾಡಿದ್ದ ಈ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂಥ ಹೇಳಿಕೆಗಳು ದೇಶದಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಬಹುದು ಹೀಗಾಗಿ ಪ್ರಧಾನಿ ಮೋದಿ ಅವರೇ ಈ ಕುರಿತು ಸ್ಪಷ್ಟನೆ ನೀಡಬೇಕು ಎಂದು ಹೇಳಿದರು.

ಭಾರತದ ಸಂವಿಧಾನ ತಿದ್ದುಪಡಿಗೊಳಿಸಲು ಬಿಜೆಪಿಗೆ 400ಕ್ಕೂ ಹೆಚ್ಚು ಸ್ಥಾನ ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತ್ ಕುಮಾರ್ ಹೆಗಡೆಯ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರು ಧೈರ್ಯವಿದ್ದರೆ ವೈಯಕ್ತಿಕವಾಗಿ ಹೇಳಿಕೆಯನ್ನು ಖಂಡಿಸಿ ಅವರನ್ನು ಪಕ್ಷದಿಂದ ಹುಚ್ಚಾಟಿಸಲಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸವಾಲ್ ಹಾಕಿದ್ದಾರೆ.

ಸಂವಿಧಾನವನ್ನು ತಿರುಚುವ ಪ್ರಯತ್ನ ಮಾಡಿದರೆ ದೇಶದಾದ್ಯಂತ ಪ್ರತಿಭಟನೆ ಎದುರಿಸಬೇಕಾಗಿತ್ತು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಸಂವಿಧಾನಕ್ಕೆ ಅಪಾಯ ಎದುರಾಗಿರುವ ಹಿನ್ನೆಲೆಯಲ್ಲಿ ಈ ಚುನಾವಣೆ ಸಾಮಾಜಿಕ ನ್ಯಾಯ ಮತ್ತು ಶೋಷಣೆ ನಡುವಿನ ಹೋರಾಟವಾಗಿ ಮಾರ್ಪಟ್ಟಿದೆ.

ಈ ಹಿಂದೆ ಕೂಡ ಅನಂತ್ ಕುಮಾರ್ ಹೆಗಡೆ ಅವರು ಹಲವು ಬಾರಿ ಇಂಥ ಹೇಳಿಕೆ ನೀಡಿದ್ದು ಅವರಿಂದ ವಿವರಣೆ ಕೇಳಲಾಗುತ್ತಿದೆ ಎಂದು ಬಿಜೆಪಿ ಹೇಳುತ್ತಿರುವುದು ಹಾಸ್ಯಸ್ಪದ ಎಂದು ಖರ್ಗೆ ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos