ಬೆಂಗಳೂರು , ಜೂನ್. 8, ನ್ಯೂಸ್ ಎಕ್ಸ್ ಪ್ರೆಸ್ : ಮಂಡ್ಯ ಕ್ಷೇತ್ರದ ಅಭಿವೃದ್ದಿ ಮಾಡಲು ಕೇಂದ್ರ ಸರ್ಕಾರ ಸಹಕಾರ ನೀಡಬೇಕೆಂದು ಸಂಸದೆ ಸುಮಲತಾ ಅಂಬರೀಶ್ ನುಡಿದರು. ಇಂದು ಮಲ್ಲೇಶ್ವರಂನ ಬಿಜೆಪಿ ಕಚೇರಿಗೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ಮಂಡ್ಯದ ಜನ ಇಟ್ಟಿರುವ ಪ್ರೀತಿ, ವಿಶ್ವಾಸದಿಂದ ಈ ಬಾರಿ ನನಗೆ ಸಂಸದೆಯಾಗಿ ಆಯ್ಕೆ ಮಾಡಿದ್ದಾರೆ. ಅವರ ಋಣ ತೀರಿಸಲು ನನಗೆ ಮೋದಿ ನೇತೃತ್ವದ ಸರ್ಕಾರ ಮಂಡ್ಯ ಕ್ಷೇತ್ರದ ಅಭಿವೃದ್ದಿಗೆ ಸಹಕಾರ ನೀಡಬೇಕು. ಚುನಾವಣೆಯಲ್ಲಿ ಬಿಜೆಪಿ ನಾಯಕರು ಸಲಹೆ ನೀಡಿದರು. ನಾನು ಕೃತಜ್ಞತೆಗಳನ್ನು ಹೇಳಲು ಬಂದಿದ್ದೇನೆ ಎಂದರು.