ಮಂಡ್ಯದಲ್ಲಿ ಶುರುವಾಗಿದೆ ಹೊಸ ದಂಧೆ!

ಮಂಡ್ಯದಲ್ಲಿ ಶುರುವಾಗಿದೆ ಹೊಸ ದಂಧೆ!

ಮಂಡ್ಯ, . 20, ನ್ಯೂಸ್ ಎಕ್ಸ್ ಪ್ರೆಸ್: 2019 ಲೋಕಸಭಾ ಚುನಾವಣೆಯಲ್ಲಿ ಭಾರೀ ಕುತುಹಲ ಮುಡಿಸಿರುವ ಮಂಡ್ಯ ಕ್ಷೇತ್ರದಲ್ಲಿ ಗೆಲ್ಲುವವರು ಯಾರು?

ಚುನಾವಣೆ ಮುಗಿಯುತ್ತಿದ್ದಂತೆ ಸೋಲು-ಗೆಲುವಿನ ಕುರಿತ ಲೆಕ್ಕಾಚಾರ ಶುರುವಾಗಿದೆ.

ಅದರಲ್ಲೂ ಮಂಡ್ಯ ಕ್ಷೇತ್ರದಲ್ಲಿ ಅಭಿಮಾನಿಗಳ ನಡುವೆ ಬಿಸಿಬಿಸಿ ಚರ್ಚೆ ನಡೆಯುತ್ತಿದ್ದು, ಕೆಲವರಂತು ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯೇ ಗೆಲ್ಲಬಹುದು ಬೇಕಿದ್ದರೆ ಬೆಟ್ ಕಟ್ಟುತ್ತೇನೆ ಅಂದರೆ, ಇದಕ್ಕೆ ಪ್ರತಿ ಸವಾಲು ಹಾಕುವ ಪಕ್ಷೇತರ ಅಭ್ಯರ್ಥಿ ಸುಮಲತಾ ಬೆಂಬಲಿಗರು ಸಾಧ್ಯನೇ ಇಲ್ಲ, ಗೆಲ್ಲೋದು ಸುಮಕ್ಕನೇ ಎಂದು ಬಾಜಿ ಕಟ್ಟಿಕೊಳ್ಳುತ್ತಿದ್ದಾರೆ.

ಮತದಾನಕ್ಕೂ ಮೊದಲೇ 2 ಅಭ್ಯರ್ಥಿಗಳಲ್ಲಿ ಯಾರು ಗೆಲ್ತಾರೆ ಎಂದು ಬೆಟ್ಟಿಂಗ್ ಆರಂಭವಾಗಿತ್ತು. ಈಗ ಬೆಟ್ಟಿಂಗ್ ಭರಾಟೆ ಮುಗಿಲು ಮುಟ್ಟಿದೆ.

ನಗದು ಸೇರಿದಂತೆ, ಕುರಿ, ಕೋಳಿ, ಜೋಡೆತ್ತುಗಳು, ಹಸು ಹಾಗೂ ಕೆಲವರಂತು ಜಮೀನನ್ನೂ ಬೆಟ್ಟಿಂಗ್ ನಲ್ಲಿ ಪಣಕ್ಕಿಟ್ಟಿದ್ದಾರೆಂದು ಹೇಳಲಾಗುತ್ತಿದೆ.

 

ಫ್ರೆಶ್ ನ್ಯೂಸ್

Latest Posts

Featured Videos