ಮಂಡ್ಯ, ಏ. 15, ನ್ಯೂಸ್ ಎಕ್ಸ್ ಪ್ರೆಸ್: 2019ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ತೀವ್ರ ಕುತೂಹಲ ಮುಡಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಶಿವರಾಮೇಗೌಡರು, ಪ್ರಚಾರಕ್ಕೆ ಬಂದರೆ ಒಬ್ಬ ವ್ಯಕ್ತಿಗೆ 500 ರೂ. ಹಣ ಕೊಡುತ್ತೇನೆ ಎಂದು ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋವೊಂದ ವೈರಲ್ ಆಗಿದೆ.
ಶಿವರಾಮೇಗೌಡರು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಚೀಣ್ಯ ಗ್ರಾಮದ ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿದ್ದಾರೆ. ಈ 43 ಸೆಕೆಂಡ್ ಗಳ ಆಡಿಯೋ ವೈರಲ್ ಆಗುತ್ತಿದ್ದು, ತೀವ್ರ ಅನುಮಾನಕ್ಕೆ ಕಾರಣವಾಗಿದೆ.
ಜೆಡಿಎಸ್ ಕಾರ್ಯಕರ್ತನಿಗೆ ಕರೆ ಮಾಡಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರಕ್ಕೆ ಜನರನ್ನು ಬೆಂಗಳೂರಿನಿಂದ ಕರೆದುಕೊಂಡು ಬಂದರೆ ಎಲ್ಲರಿಗೂ 500 ರೂ. ಕೊಡುತ್ತೇವೆ ಎಂದು ಶಿವರಾಮೇಗೌಡರು ಮಾತನಾಡಿದ್ದಾರೆ ಎನ್ನಲಾಗಿದೆ.