ಮಂಗಳೂರು, ಅ. 14: ಅರಬ್ಬೀ ಸಮದ್ರ ಮತ್ತು ಲಕ್ಷ ದ್ವೀಪದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ದ.ಕ.ಜಿಲ್ಲೆ ಸೇರಿದಂತೆ ಮಂಗಳೂರು ನಗರದಲ್ಲಿ ಇಂದು ಬೆಳಗ್ಗೆಯಿಂದಲೇ ಉತ್ತಮ ಮಳೆಯಾಗಿದ್ದು, ಮಧ್ಯಾಹ್ನ ಸುರಿದ ಭಾರೀ ಮಳೆಯಿಂದಾಗಿ ನಗರದಲ್ಲಿ ಕೆಲವು ತಗ್ಗು ಪ್ರದೇಶಗಳು ಜಲವೃತ್ತಗೊಂಡಿದೆ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇಂದು ಮತ್ತು ನಾಳೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಈ ವೇಳೆ 64.5 ಮಿ.ಮೀನಿಂದ 115.5 ಮಿ.ಮೀ ವರೆಗೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.