ಮಂಗಳೂರು: ಕರಾವಳಿ ಜನರ ಬೇಡಿಕೆಯ ಮಂಗಳೂರು-ಬೆಂಗಳೂರು ನೂತನ ರೈಲು ಸಂಚಾರ ಆರಂಭಗೊಂಡಿದೆ.
ಈ ನೂತನ ರೈಲಿಗೆ ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಇಂದು ಸಂಸದ ನಳಿನ್ ಕುಮಾರ್ ಕಟೀಲ್ ಚಾಲನೆ ನೀಡಿದರು.
ಈ ಹೊಸ ರೈಲು ನಿಗದಿತ ವೇಳಾಪಟ್ಟಿಯಂತೆ ಸಂಚರಿಸಲಿದೆ. ಸದ್ಯಕ್ಕೆ ವಾರದಲ್ಲಿ ಮೂರು ದಿನ ಮಾತ್ರ ಸಂಚರಿಸುವ ರೈಲು ಮಾರ್ಚ್ನ ಆನಂತರ ಪ್ರತೀ ದಿನ ರಾತ್ರಿ ವೇಳೆ ಸಂಚರಿಸಲಿದೆ ಎಂದು ಹೇಳಲಾಗಿದೆ.