ಪೊಳಲಿ(ಮಂಗಳೂರು), ಮಾ.9, ನ್ಯೂಸ್ ಎಕ್ಸ್ ಪ್ರೆಸ್: ಮಾ.9ರಂದು ಮಂಗಳೂರಿನ ಪೊಳಲಿಯಲ್ಲಿ ನಡೆಯಲಿರುವ ಬಿಜೆಪಿ ಕ್ಲಸ್ಟರ್ ಮಟ್ಟದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸುವ ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ರಾಜ್ ನಾಥ್ ಸಿಂಗ್ ಅವರು ಅಂದು ಸಂಜೆ ಪೊಳಲಿಗೆ ಆಗಮಿಸಲಿದ್ದಾರೆ.
ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ ನಾಥ್ ಸಿಂಗ್ ಅವರು ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಬಳಿಕ ದೆಹಲಿಗೆ ವಾಪಸ್ ಆಗಲಿದ್ದಾರೆ.
ಇನ್ನು ಬಿಗಿ ಭದ್ರತೆ ಕೈಗೊಂಡಿರುವ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದಾರೆ.