ಮಂಗಳೂರು, ಜು, 10 : ಸಂಜೆ ಯಿಂದ ಕರಾವಳಿಯಲ್ಲಿ ಮುಂಗಾರು ಮಳೆ ಬಿರುಸಾಗಿದ್ದು, ಮಂಗಳೂರು ನಗರದ ಆಕಾಶಭವನದಲ್ಲಿ ಲಘು ಭೂಕುಸಿತ ಸಂಭವಿಸಿ ಮನೆಗೆ ಹಾನಿ ಯಾಗಿದೆ. ಪುತ್ತೂರು ತಾಲ್ಲೂಕಿನ ನರಿಮೊಗರು ಸರ್ಕಾರಿ ಶಾಲೆಯ ಶೌಚಾಲಯದ ಮೇಲೆ ಮರ ಉರುಳಿ ವಿದ್ಯಾರ್ಥಿಗೆ ಗಾಯವಾಗಿದೆ. ಪುತ್ತೂರು ತಾಲ್ಲೂಕಿನ ನರಿಮೊಗರು ಸರ್ಕಾರಿ ಶಾಲೆಯ ಶೌಚಾಲಯ ಮೇಲೆ ಮರವೊಂದು ಉರುಳಿ ಬಿದ್ದು, ಶೌಚಾಲಯದ ಬಳಿಯಲ್ಲೇ ಇದ್ದರು. ಒಬ್ಬ ವಿದ್ಯಾರ್ಥಿಗೆ ಗಾಯವಾಗಿದೆ.