ಮಂಗನಕಾಯಿಲೆ ಪತ್ತೆ

ಮಂಗನಕಾಯಿಲೆ ಪತ್ತೆ

ಶಿವಮೊಗ್ಗ, ಏ .13 : ಮಲೆನಾಡಿನಲ್ಲಿ ಮಂಗನಕಾಯಿಲೆ(ಕೆಎಫ್ಡಿ) ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣುತ್ತಿಲ್ಲ. ತೀರ್ಥಹಳ್ಳಿ ಮತ್ತು ಸಾಗರ ತಾಲೂಕಿನ ಮತ್ತಿಬ್ಬರಲ್ಲಿ ಕೆಎಫ್ಡಿ ಸೋಂಕು ದೃಢವಾಗಿದೆ. ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ಗುಡ್ಡೇಕೊಪ್ಪ ಗ್ರಾ. ಪಂ. ವ್ಯಾಪ್ತಿಯ ವಡ್ಡಿನಬೈಲು ಗ್ರಾಮದ ಭಾರತಿ (49) ಎಂಬುವವರಲ್ಲಿ ಕೆಎಫ್ಡಿ ಸೋಂಕು ಇರುವುದು ದೃಢವಾಗಿದೆ. ಇವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ಸೇರಿಸಲಾಗಿದೆ. ಸಾಗರದಲ್ಲೂ ಒಂದು ಕೇಸ್ ಪತ್ತೆ ಸಾಗರ ತಾಲೂಕಿನ ಮಹಿಳೆಯೊಬ್ಬರಿಗೂ ಕೆಎಫ್ಡಿ ದೃಢವಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos