ಸಹಾಯ ಮಾಡೋದೇ ಮನುಷ್ಯ ಗುಣ

ಸಹಾಯ ಮಾಡೋದೇ ಮನುಷ್ಯ ಗುಣ

ಕೆ.ಆರ್.ಪುರ:ದಿನ ನಿತ್ಯ ಜೀವನದಲ್ಲಿ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಾಗ ಕಣ್ಮುಂದೆ ಕಷ್ಟದಲ್ಲಿ ಇರುವವರು ಕಂಡರೆ ಸುಮ್ಮನೇ ಹೋಗದೆ ತಮ್ಮ ಕೈಲಾಗುವ ಸಹಾಯ ಮಾಡಿ ಎಂದು ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯಾಧ್ಯಕ್ಷ ಡಾ.ಲೋಹಿತ್ ಸುವರ್ಣ ತಿಳಿಸಿದರು.

ಅಖಿಲ ಭಾರತ ಹಿಂದೂ ಮಹಾಸಭಾ ಕೆ.ಆರ್.ಪುರ ಕ್ಷೇತ್ರದ ಶಾಖೆಯ ಕಚೇರಿಯನ್ನು ಉದ್ಘಾಟಿಸಿ ನಂತರ  ಅವರು ಮಾತನಾಡಿದರು. ಕಷ್ಟಕಾಲದಲ್ಲಿ ನೆರವಾಗುವ ಕೆಲಸ ಪ್ರತಿಯೊಬ್ಬರೂ ಮಾಡಬೇಕು ಎಂದು ಹೇಳಿದರು.

ಬಿಜೆಪಿ ಎಸ್.ಟಿ ಮೋರ್ಚಾ ಜಿಲ್ಲಾಧ್ಯಕ್ಷ ಬಾಕ್ಸರ್ ನಾಗರಾಜ್ ಮಾತನಾಡಿ, ಕೊರೋನಾ ಸಂದರ್ಭದಲ್ಲಿ ಬಹುಪಾಲು ಕೂಲಿ ಕಾರ್ಮಿಕರು ಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಅಂತವರನ್ನು ಹುಡುಕಿ ಅವರಿಗೆ ಸಹಾಯ ಮಾಡುವ ಕೆಲಸ ಪ್ರತಿಯೊಬ್ಬರೂ ಮಾಡಬೇಕು ಎಂದರು. ಈಗಾಗಲೆ ಸಾವಿರಾರು ಮಂದಿಗೆ ವೈಯಕ್ತಿಕವಾಗಿ ರೇಷನ್ ಕಿಟ್ ಗಳನ್ನು ವಿತರಿಸಿದ್ದೇನೆ, ಹೆಲ್ತ್ ಕಾರ್ಡ್ಗಳನ್ನು ವಿತರಿಸಿದ್ದೇನೆ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರ ಮಾರ್ಗದರ್ಶನದಂತೆ ಹಲವು ಬಡವರಿಗೆ ಸಹಾಯ ಮಾಡಿದ್ದೇನೆ ಎಂದು ಹೇಳಿದರು.

ಕೊರೋನಾ ಸಂದರ್ಭದಲ್ಲಿ ಎಲ್ಲರೂ ಜಾಗರೂಕತೆಯಿಂದ ಇರಬೇಕು, ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಆಗಾಗ ಕೈಗಳನ್ನು ಸ್ವಚ್ಚಗೊಳಿಸುತ್ತಿರಬೇಕು ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಕ್ಷೇತ್ರದ ಅದ್ಯಕ್ಷ ಒ.ಕೃಷ್ಣಮೂರ್ತಿ ಅವರು ವಿಜಿನಾಪುರದಲ್ಲಿ ಪೌರಕಾರ್ಮಿಕರಿಗಾಗಿ ಸಿದ್ದಪಡಿಸಿದ್ದ ಸುಮಾರು ೩೦೦ ರೇಷನ್ ಕಿಟ್‌ಗಳನ್ನು ವಿತರಿಸಲಾಯಿತು.

 

ಫ್ರೆಶ್ ನ್ಯೂಸ್

Latest Posts

Featured Videos