ಮರದ ಕೊಂಬೆ ಬಿದ್ದು ಸಂಚಾರ ಸ್ಥಗಿತ

ಮರದ ಕೊಂಬೆ ಬಿದ್ದು  ಸಂಚಾರ ಸ್ಥಗಿತ

ಹುಬ್ಬಳ್ಳಿ, ಜೂನ್. 7, ನ್ಯೂಸ್ ಎಕ್ಸ್ ಪ್ರೆಸ್ : ಬೆಂಗಳೂರಿನಿಂದ ಕೊಲ್ಲಾಪುರಕ್ಕೆ ತೆರಳುತ್ತಿದ್ದ ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್‌ ರೈಲಿನ ಬೋಗಿ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿ ಮರದ ಕೊಂಬೆಯೊಂದು ಬಿದ್ದು, ಸುಮಾರು ಒಂದು ಗಂಟೆ ಸಂಚಾರ ಸ್ಥಗಿತಗೊಂಡ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಈ ರೈಲಿನಲ್ಲಿ ಶಾಸಕ ಸಿ.ಸಿ.ಪಾಟೀಲ್‌ ಸೇರಿದಂತೆ ಕೆಲ ಶಾಸಕರಿದ್ದು, ಅದೃಷ್ಟವಶಾತ್‌ ಪ್ರಯಾಣಿಕರಾರ‍ಯರಿಗೂ ಹಾನಿಯಾಗಿಲ್ಲ.

ಜಿಲ್ಲೆ ನೆಲಮಂಗಲ ತಾಲೂಕಿನ ಮುದ್ದಲಿಂಗನಹಳ್ಳಿ ಗೇಟ್‌ ಬಳಿ ಸಾಗುತ್ತಿದ್ದಾಗ ಭಾರೀ ಗಾಳಿ-ಮಳೆಗೆ ಮರವೊಂದರ ಕೊಂಬೆ ಕೊನೇ ಬೋಗಿ ಮೇಲೆ ಬಿದ್ದಿದೆ. ನಂತರ ಸಿಬ್ಬಂದಿ ಒಂದು ಗಂಟೆ ಕಾರ್ಯಾಚರಣೆ ನಡೆಸಿ ಮರವನ್ನು ತೆರವುಗೊಳಿಸಿದ ಬಳಿಕ ರೈಲು ಹುಬ್ಬಳ್ಳಿ ಕಡೆಗೆ ಹೊರಟಿತು ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.

ಫ್ರೆಶ್ ನ್ಯೂಸ್

Latest Posts

Featured Videos