ಹುಬ್ಬಳ್ಳಿ, ಜೂನ್. 7, ನ್ಯೂಸ್ ಎಕ್ಸ್ ಪ್ರೆಸ್ : ಬೆಂಗಳೂರಿನಿಂದ ಕೊಲ್ಲಾಪುರಕ್ಕೆ ತೆರಳುತ್ತಿದ್ದ ರಾಣಿ ಚೆನ್ನಮ್ಮ ಎಕ್ಸ್ಪ್ರೆಸ್ ರೈಲಿನ ಬೋಗಿ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿ ಮರದ ಕೊಂಬೆಯೊಂದು ಬಿದ್ದು, ಸುಮಾರು ಒಂದು ಗಂಟೆ ಸಂಚಾರ ಸ್ಥಗಿತಗೊಂಡ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಈ ರೈಲಿನಲ್ಲಿ ಶಾಸಕ ಸಿ.ಸಿ.ಪಾಟೀಲ್ ಸೇರಿದಂತೆ ಕೆಲ ಶಾಸಕರಿದ್ದು, ಅದೃಷ್ಟವಶಾತ್ ಪ್ರಯಾಣಿಕರಾರಯರಿಗೂ ಹಾನಿಯಾಗಿಲ್ಲ.
ಜಿಲ್ಲೆ ನೆಲಮಂಗಲ ತಾಲೂಕಿನ ಮುದ್ದಲಿಂಗನಹಳ್ಳಿ ಗೇಟ್ ಬಳಿ ಸಾಗುತ್ತಿದ್ದಾಗ ಭಾರೀ ಗಾಳಿ-ಮಳೆಗೆ ಮರವೊಂದರ ಕೊಂಬೆ ಕೊನೇ ಬೋಗಿ ಮೇಲೆ ಬಿದ್ದಿದೆ. ನಂತರ ಸಿಬ್ಬಂದಿ ಒಂದು ಗಂಟೆ ಕಾರ್ಯಾಚರಣೆ ನಡೆಸಿ ಮರವನ್ನು ತೆರವುಗೊಳಿಸಿದ ಬಳಿಕ ರೈಲು ಹುಬ್ಬಳ್ಳಿ ಕಡೆಗೆ ಹೊರಟಿತು ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ.