ಶಿವಲಿಂಗ ಕ್ಕೂ ಮಾಸ್ಕ್

ಶಿವಲಿಂಗ ಕ್ಕೂ ಮಾಸ್ಕ್

ಉತ್ತರ ಪ್ರದೇಶ, ನ. 7 : ಪ್ರಧಾನಿ ನರೇಂದ್ರ ಮೋದಿ ಸ್ವಕ್ಷೇತ್ರ ವಾರಣಾಸಿಯಲ್ಲಿ ವಾಯು ಮಾಲಿನ್ಯ ಮಿತಿ ಮೀರಿದ್ದು, ತಾರಾಕೇಶ್ವರ ಮಹಾದೇವ ದೇವಾಲಯದಲ್ಲಿನ ಶಿವಲಿಂಗವನ್ನು ಅರ್ಚಕರು ಮಾಸ್ಕ್ ನಿಂದ ಮುಚ್ಚಿದ್ದಾರೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವಾಯು ಗುಣಮಟ್ಟದ ಸೂಚ್ಯಂಕದ ಪ್ರಕಾರ 226 ನಗರಗಳಲ್ಲಿ ವಾಯುವಿನ ಗುಣಮಟ್ಟ ಕಳಪೆ ಮಟ್ಟದಿಂದ ಕೂಡಿದೆ.

ನಗರದಲ್ಲಿ ವಾಯು ಮಾಲಿನ್ಯ ಹೆಚ್ಚಾಗಿದ್ದು, ಬೋಲೆ ಬಾಬಾನನ್ನು ವಿಷಕಾರಿ ಗಾಳಿಯಿಂದ ಸಂರಕ್ಷಿಸುವ ಉದ್ದೇಶದಿಂದ ಮಾಸ್ಕ್ ಹಾಕಲಾಗಿದೆ.
ಬೋಲೆ ಬಾಬಾ ಸುರಕ್ಷಿತವಾಗಿದ್ದರೆ ಮಾತ್ರ ನಾವೆಲ್ಲಾ ಸುರಕ್ಷಿತವಾಗಿರುತ್ತೇವೆ ಎಂದು ನಂಬಿರುವುದಾಗಿ ಭಕ್ತಾಧಿ ಅಲೋಕ್ ಮಿಶ್ರಾ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos