ಬಿಡದಿ, ಏ. 18, ನ್ಯೂಸ್ ಎಕ್ಸ್ ಪ್ರೆಸ್: ನಮ್ಮ ಸರಿ ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯುತಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿ ಸಿಎಂ ಕುಮಾರಸ್ವಾಮಿ ಇಂದು ಮತ ಚಲಾಯಿಸಿದರು. ಕುಟುಂಬ ಸಮೇತರಾಗಿ ಬಂದು ಸಿಎಂ ಕುಮಾರಸ್ವಾಮಿ ಮತದಾನ ಮಾಡಿದರು. ಕುಮಾರಸ್ವಾಮಿ, ಪುತ್ರ ನಿಖಿಲ್ ಹಾಗೂ ಪತ್ನಿ ಅನಿತಾ ಮತಗಟ್ಟೆ 235ರಲ್ಲಿ ಮತ ಚಲಾವಣೆ ಮಾಡಿದರು.