ಬೆಂಗಳೂರು ಏ. 18, ನ್ಯೂಸ್ ಎಕ್ಸ್ ಪ್ರೆಸ್: ಇಂದು ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯುತಿದ್ದು, ಕನ್ನಡ ಚಿತ್ರರಂಗದ ಖ್ಯಾತ ನಟ ಕಿಚ್ಚ ಸುದೀಪ್ ಬೆಂಗಳೂರು ಜೆಪಿ ನಗರದ ಮತಗಟ್ಟೆಯಲ್ಲಿ ಅವರ ಪತ್ನಿ ಪ್ರಿಯಾ ಅವರೊಂದಿಗೆ ಆಗಮಿಸಿ ಮತದಾನ ಮಾಡಿದ್ದಾರೆ.
ಮತದಾನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನ ಮಾಡುವುದು ಎಲ್ಲರ ಜವಾಬ್ದಾರಿಯಾಗಿದೆ. ಇದನ್ನು ಯಾರೂ ಹೇಳಿ ಮಾಡಬೇಕಿಲ್ಲ. ಎಲ್ಲರೂ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂದು ಹೇಳಿದ್ದಾರೆ.
ಮತದಾನದ ದಿನ ಮನೆಯಲ್ಲಿ ಕುಳಿತವರಿಗೆ ದೇವರು ಒಳ್ಳೆಯದು ಮಾಡಲಿ. ನಾನು ಈ ಬಾರಿ ಪ್ರಚಾರಕ್ಕೆ ಹೋಗಿಲ್ಲ. 2 ವರ್ಷಗಳ ಹಿಂದೆಯೇ ಚುನಾವಣೆ ಪ್ರಚಾರಕ್ಕೆ ಹೋಗದಿರಲು ನಿರ್ಧಾರ ಕೈಗೊಂಡಿದ್ದೇನೆ. ಹಾಗೆಂದು ನನ್ನ ಬೆಂಬಲ ಇಲ್ಲವೆಂದಲ್ಲ. ನಾನು ಅಲ್ಲಿ ಇಲ್ಲದಿದ್ದರೂ ಬೆಂಬಲ ಇರುತ್ತದೆ ಎಂದು ಪತ್ರಕರ್ತರ ಪ್ರಶ್ನೆಗೆ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ.