ದಾವಣಗೆರೆ, ಸೆ. 30 : ಪ್ರವಾಹ ಪೀಡಿತ ಪ್ರದೇಶಗಳಿಗೆ ಮತ್ತೆ 3 ದಿನ ಭೇಟಿ ನೀಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆಯ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಭಾನುವಾರ ಬಾಳೆಹೊನ್ನೂರು ರಂಭಾಪುರಿ ಸ್ವಾಮೀಜಿ ಅವರ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಪ್ರವಾಹದಿಂದಾಗಿ ನಲುಗಿದ್ದ ಜಿಲ್ಲೆಗಳ ಹಾಲಿ ಸ್ಥಿತಿಗತಿ ವರದಿಯನ್ನು ಅಧಿಕಾರಿಗಳಿಂದ ಪಡೆದಿದ್ದೇನೆ. ಇದಾಗ್ಯೂ ಖುದ್ಧಾಗಿ ನಾನೇ ಜಿಲ್ಲೆಗಳಿಗೆ ಭೇಟಿ ನೀಡಿ ನೇರವಾಗಿ ಜನರಿಂದಲೇ ಮಾಹಿತಿ ಪಡೆಯುತ್ತೇನೆ. ಅಕ್ಟೋಬರ್ 3, 4 ಮತ್ತು 5 ರಂದು ಪ್ರವಾಹ ಪೀಡಿತ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಅಲ್ಲದೆ ಭೇಟಿ ವೇಳೆ ಪ್ರವಾಹ ಸಂತ್ರಸ್ಥರಿಗೆ ಸರ್ಕಾರ ನೀಡಿದ್ದ ಪರಿಹಾರ ಸಮರ್ಪಕವಾಗಿ ಹಂಚಿಕೆಯಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸುತ್ತೇನೆ ಎಂದು ಹೇಳಿದರು.