ಬೆಂಗಳೂರು, ಆ. 15 : ರಾಜ್ಯದಲ್ಲಿ ಮಂತ್ರಿ ಗಿರಿಗಾಗಿ ಲಾಬಿ ಜೋರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿ ಒಂದು ತಿಂಗಳು ಕಳೆಯುತ್ತಾ ಬಂದಿದೆ. ಆದರೂ ಕೂಡ ಸಂಪುಟ ವಿಸ್ತರಣೆಯಾಗದ ಕಾರಣ ಗುರುಮಠಕಲ್ ಕ್ಷೇತ್ರದ ಬಿಜೆಪಿ ಶಾಸಕ ಬಾಬೂರಾವ್ ಚಿಂಚನಸೂರ್ ಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಬೆಂಬಲಿಗರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾಲಿಗೆ ಬಿದ್ದಿದ್ದಾರೆ.
ಮುಖ್ಯಮಂತ್ರ ಯಡ್ಡಿಯೂರಪ್ಪ ನವರಿಗೆ ಚಿಂಚನಸೂರು ಬೆಂಬಲಿಗರು ಮನವಿ ಮಾಡಿ, ನಮ್ಮ ನಾಯಕನಿಗೆ ಸಚಿವ ಸ್ಥಾನ ಕೊಡಿ. ಲೋಕಸಭಾ ಚುನಾವಣೆಯ ಹಿನ್ನಲೆ ಉತ್ತಮವಾಗಿ ಕಾರ್ಯ ನಿರ್ವಹಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಕಯ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಪಾತ್ರ ಮಹತ್ವದ್ದಾಗಿದೆ. ಆದ್ದರಿಂದ ಮಂತ್ರಿ ಸ್ಥಾನ ನೀಡಬೇಕು ಎಂದು ಕೇಳಿದರು.
ಬೆಂಬಲಿಗರಿಗೆ ಸಿಎಂ ಯಡ್ಡಿಯೂರಪ್ಪ ಪ್ರತಿಕ್ರಿಯೆ ನೀಡಿ, ನೀವು ಬಂದು ಕೇಳುವ ಅಗತ್ಯವಿಲ್ಲ. ಈ ವಿಚಾರವನ್ನು ನಮ್ಮ ರಾಷ್ಟ್ರೀಯ ಅಧ್ಯಕ್ಷರಿಗೆ ತಿಳಿಸುತ್ತೇನೆ. ನನ್ನ ಪ್ರಯತ್ನ ನಾನು ಮಾಡುತ್ತೇನೆ ಎಂದು ಚಿಂಚನಸೂರು ಬೆಂಬಲಿಗರಿಗೆ ಬಿ ಎಸ್ ವೈ ಭರವಸೆ ನೀಡಿದರು.